ಮೈಕೊರೆಯುವ ಚಳಿಗೆ ತತ್ತರಿಸಿದ ಜನತೆ: ಬೀದರ್‌ನಲ್ಲಿ ಕನಿಷ್ಠ ತಾಪಮಾನ ದಾಖಲು

Kannadaprabha News   | Asianet News
Published : Dec 22, 2020, 10:45 AM IST
ಮೈಕೊರೆಯುವ ಚಳಿಗೆ ತತ್ತರಿಸಿದ ಜನತೆ: ಬೀದರ್‌ನಲ್ಲಿ ಕನಿಷ್ಠ ತಾಪಮಾನ ದಾಖಲು

ಸಾರಾಂಶ

ರಾಜ್ಯದಲ್ಲಿ ಈ ವರ್ಷದ ಅತ್ಯಂತ ಕನಿಷ್ಠ ತಾಪಮಾನ| ವಿಜಯಪುರದಲ್ಲಿ 10 ಡಿಗ್ರಿ ಸೆಲ್ಸಿಯಸ್‌, ಧಾರವಾಡ 11.8, ದಾವಣಗೆರೆ 12.3, ಹಾಸನ 12.4 ಹಾಗೂ ಶಿವಮೊಗ್ಗದಲ್ಲಿ 13.8 ಡಿ.ಸೆ. ಕನಿಷ್ಠ ತಾಪಮಾನ ದಾಖಲು|ಅಧಿಕ ಚಳಿ, ಮಧ್ಯಾಹ್ನ ಒಣ ಹವೆ|  

ಬೆಂಗಳೂರು(ಡಿ.22): ರಾಜ್ಯದಲ್ಲಿ ಚಳಿಯ ಪ್ರಮಾಣ ದಿನೇ ದಿನೆ ಹೆಚ್ಚುತ್ತಿದ್ದು, ಬೀದರ್‌ ಜಿಲ್ಲೆಯಲ್ಲಿ ಸೋಮವಾರ ಅತ್ಯಂತ ಕನಿಷ್ಠ ತಾಪಮಾನ 6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಇದು ರಾಜ್ಯದಲ್ಲಿ ಈ ವರ್ಷ ದಾಖಲಾದ ಅತ್ಯಂತ ಕನಿಷ್ಠ ತಾಪಮಾನವಾಗಿದೆ.

ಮಹಾರಾಷ್ಟ್ರದಿಂದ ಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ಚಳಿ ಹೆಚ್ಚಾಗಿದೆ. ಬೀದರ್‌ನಲ್ಲಿ ಸೋಮವಾರ ಗರಿಷ್ಠ 26.4 ಹಾಗೂ ಕನಿಷ್ಠ 6.0 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಮೂರು ವರ್ಷದ ಬಳಿಕ ಅತಿ ಹೆಚ್ಚು ಚಳಿ ಬೀದರ್‌ನಲ್ಲಿ ದಾಖಲಾಗಿದೆ. ಈ ಚಳಿ ಕನಿಷ್ಠ ವಾಡಿಕೆ ಚಳಿಗಿಂತ ಶೇ.9.5ರಷ್ಟು ಅಧಿಕವಾಗಿದೆ.

ಕನಿಷ್ಠ ತಾಪಮಾನ ದಾಖಲು: ಇನ್ನೂ ಹೆಚ್ಚಾಗಲಿದೆ ಮೈಕೊರೆಯುವ ಚಳಿ

ಕಳೆದ ಮೂರು ವರ್ಷದ ಹಿಂದೆ 6 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಬೀದರ್‌ನಲ್ಲೇ ದಾಖಲಾಗಿತ್ತು. ಇದೀಗ ಮತ್ತೆ ಎರಡನೇ ಬಾರಿ ಅಷ್ಟೇ ಪ್ರಮಾಣದಲ್ಲಿ ಚಳಿ ಕಂಡುಬಂದಿದೆ. ಇನ್ನು 2020ರ ನವೆಂಬರ್‌ 10ರಂದು ಬೀದರ್‌ನಲ್ಲಿ 7.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಒಳನಾಡಿನಲ್ಲೇ ಹೆಚ್ಚು ಚಳಿ ದಾಖಲಾಗುತ್ತಿದ್ದು, ಬೀದರ್‌ ಬಿಟ್ಟರೆ ವಿಜಯಪುರದಲ್ಲಿ 10 ಡಿಗ್ರಿ ಸೆಲ್ಸಿಯಸ್‌, ಧಾರವಾಡ 11.8, ದಾವಣಗೆರೆ 12.3, ಹಾಸನ 12.4 ಹಾಗೂ ಶಿವಮೊಗ್ಗದಲ್ಲಿ 13.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿದೆ. ಹೀಗಾಗಿ ಬೆಳಗ್ಗೆ ಅಧಿಕ ಚಳಿ, ಮಧ್ಯಾಹ್ನ ಒಣ ಹವೆ ಕಂಡುಬರುತ್ತಿದೆ. ಇನ್ನು ರಾಜ್ಯದ ಗರಿಷ್ಠ ತಾಪಮಾನ ಹೊನ್ನಾವರದಲ್ಲಿ 34.2 ಡಿ.ಸೆ. ದಾಖಲಾಗಿದ್ದು, ಉತ್ತರ ಒಳನಾಡಿನ ಬೆಳಗಾವಿ 34.2, ದಕ್ಷಿಣ ಒಳನಾಡಿನ ಆಗುಂಬೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ