ಶ್ರೀಗಳ ಕ್ರಿಯಾವಿಧಿಯಲ್ಲಿ ಸಚಿವರ ಸೊಕ್ಕು: ಸಚಿವರನ್ನು ಸಮರ್ಥಿಸಿದ ಸಿಎಂ

Published : Jan 23, 2019, 03:41 PM ISTUpdated : Jan 23, 2019, 06:26 PM IST
ಶ್ರೀಗಳ ಕ್ರಿಯಾವಿಧಿಯಲ್ಲಿ ಸಚಿವರ ಸೊಕ್ಕು: ಸಚಿವರನ್ನು ಸಮರ್ಥಿಸಿದ ಸಿಎಂ

ಸಾರಾಂಶ

ಶ್ರೀಗಳ ಗದ್ದುಗೆಗೆ ಪ್ರವೇಶಿಸಲು ನಿರಾಕರಿಸಿದ ಪೊಲೀಸ್ ಅಧಿಕಾರಿ ಮೆಲೆ ರೇಗಾಡಿದ ಸಾ. ರಾ ಮಹೇಶ್ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಗುತ್ತಿದೆ. ಹೀಗಿದ್ದರೂ ಸಿಎಂ ಕುಮಾರಸ್ವಾಮಿ ಮಾತ್ರ ಸಚಿವರ ಬೆಂಬಕ್ಕೆ ನಿಂತಿದ್ದು, ಅವರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು[ಜ.23]: ತನ್ನ ಕರ್ತವ್ಯ ಪಾಲಿಸಿದ ಮಹಿಳಾ ಎಸ್ಪಿ ದಿವ್ಯಾ ಗೋಪಿನಾಥ್ ವಿರುದ್ಧ ಕೂಗಾಡಿದ ಸಚಿವ ಸಾ.ರಾ.ಮಹೇಶ್ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದರೂ ಸಿಎಂ ಕುಮಾರಸ್ವಾಮಿ ಮಾತ್ರ ಸಚಿವರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

"

ಘಟನೆಯ ಕುರಿತಾಗಿ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ 'ಅಚಾತುರ್ಯ ನಡೆದಿರುವುದು ನಿಜ. ಇದನ್ನು ದೊಡ್ಡದು ಮಾಡುವುದು ಬೇಡ, ಎಂದು ಅಧಿಕಾರಿನ್ನು ನಾನೇ ಕರೆದು ನೀವೆಲ್ಲಾ ಒಳ್ಳೆ ಕೆಲಸ ಮಾಡಿದ್ದೀರಿ. ಆದರೆ ಇಂತಹ ಕೆಲಸ ಮಾಡುವ ಸಂದರ್ಭದಲ್ಲಿ ತಾವು ತೆಗೆದುಕೊಳ್ಳುವ ನಿರ್ಧಾರ ಮುಜುಗರಕ್ಕೀಡು ಮಾಡುವಂತಹುದ್ದನ್ನು ಗಮನಿಸಿದ್ದೇನೆ' ಎಂದಿದ್ದಾರೆ. ಈ ಮೂಲಕ ತಮ್ಮ ಪಕ್ಷದ ನಾಯಕ ಹಾಗೂ ಸಚಿವ ಸಾ. ರಾ ಮಹೇಶ್ ರವರು ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ ನಡೆದುಕೊಂಡ ವರ್ತನೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಶ್ರೀಗಳ ಕ್ರಿಯಾವಿಧಿ ವೇಳೆ ಮಹಿಳಾ ಅಧಿಕಾರಿಗೆ ಸಚಿವರಿಂದ ಅವಮಾನ

ಸಚಿವರ ನಡೆಗೆ ತುಮಕೂರಿನ ಜನರು ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಿದ್ದರೂ ಸಿಎಂ ಕುಮಾರಸ್ವಾಮಿ ಮಾತ್ರ ಸಚಿವರನ್ನು ಸಮರ್ಥಿಸಿಕೊಂಡಿರುವುದು ಅಚ್ಚರಿ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!