ಕಠಿಣ ಸಮಸ್ಯೆ ಪರಿಹರಿಸಲು ಸಿಎಂ ದೆಹಲಿಗೆ : ಸುಳಿವು ಕೊಟ್ಟ ಸಚಿವರು

Kannadaprabha News   | Asianet News
Published : Sep 09, 2021, 09:07 AM IST
ಕಠಿಣ ಸಮಸ್ಯೆ ಪರಿಹರಿಸಲು ಸಿಎಂ ದೆಹಲಿಗೆ : ಸುಳಿವು ಕೊಟ್ಟ ಸಚಿವರು

ಸಾರಾಂಶ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಜಟಿಲವಾದ ಸಮಸ್ಯೆ ಪರಿಹಾರ ಹುಡುಕಲು ದೆಹಲಿಗೆ ಹೋಗಿ ಬರುತ್ತಿದ್ದಾರಷ್ಟೇ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ 

ಧಾರವಾಡ (ಸೆ.09) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಜಟಿಲವಾದ ಸಮಸ್ಯೆಗಳಿದ್ದು, ಅವುಗಳಿಗೆ ಪರಿಹಾರ ಹುಡುಕಲು ದೆಹಲಿಗೆ ಹೋಗಿ ಬರುತ್ತಿದ್ದಾರಷ್ಟೇ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಕಳೆದ ಬಾರಿ ದೆಹಲಿಗೆ ಹೋದಾಗ ಮುಖ್ಯಮಂತ್ರಿಗಳು ಹಣಕಾಸು ಸಚಿವರನ್ನು ಭೇಟಿ ಮಾಡಿದ್ದಾರೆ. ಈ ಕುರಿತಾದ ಭಾವಚಿತ್ರಗಳು ಸಹ ಬಂದಿರುವುದು ಮಾಧ್ಯಮಗಳಿಗೂ ಗೊತ್ತು. 

ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಯಲ್ಲಿ ಇದ್ದಾರೆ. ಏನ್ ಸಮಾಚಾರ?

ಇದರೊಂದಿಗೆ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಬೇರೆ ಬೇರೆ ಕೆಲಸಗಳೂ ಇರುತ್ತವೆ. ಅದಕ್ಕಾಗಿ ದೆಹಲಿಗೆ ಹೋಗಿ ಬರುತ್ತಾರೆ. ಅವರು ದೆಹಲಿಗೆ ಹೋಗುವುದೆಲ್ಲ ಕೇವಲ ಹೈಕಮಾಂಡ್‌ ಭೇಟಿಗಾಗಿಯೇ ಹೋಗುತ್ತಾರೆ ಎಂದರೆ ಹೇಗೆ? ನಮ್ಮಲ್ಲಿ ಯಾವ ವæೖಮನಸ್ಸೂ ಇಲ್ಲ. ಎಲ್ಲವೂ ತುಂಬಾ ಚೆನ್ನಾಗಿದೆ. 

ಅಮಿತ್‌ ಶಾ ಅವರೇ ಮುಕ್ತವಾಗಿ ಮುಖ್ಯಮಂತ್ರಿಗಳ ಬಗ್ಗೆ ಹೇಳಿ ಹೋಗಿದ್ದಾರೆ. ರಾಜ್ಯದಲ್ಲಿ ಜಟಿಲವಾದ ಸಮಸ್ಯೆಗಳಿದ್ದು ಅವುಗಳಿಗೆ ಪರಿಹಾರ ಹುಡುಕಲು ದೆಹಲಿಗೆ ಹೋಗಿ ಬರುತ್ತಿದ್ದಾರಷ್ಟೇ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ