ಚಿತಾಭಸ್ಮ ವಿಸರ್ಜನೆ ಮಾಡಿದ್ದ ಸಚಿವ ಆರ್. ಅಶೋಕ್‌ ರಿಂದ ಮತ್ತೊಂದು ಮಾನವೀಯ ಕಾರ್ಯ

Suvarna News   | Asianet News
Published : Oct 01, 2021, 01:29 PM IST
ಚಿತಾಭಸ್ಮ ವಿಸರ್ಜನೆ ಮಾಡಿದ್ದ ಸಚಿವ ಆರ್. ಅಶೋಕ್‌ ರಿಂದ ಮತ್ತೊಂದು ಮಾನವೀಯ ಕಾರ್ಯ

ಸಾರಾಂಶ

ಚಿತಾಭಸ್ಮ ವಿಸರ್ಜನೆ ಮಾಡಿದ್ದ ಕಂದಾಯ ಸಚಿವ ಆರ್. ಅಶೋಕ್‌ ರಿಂದ ಮತ್ತೊಂದು ಮಾನವೀಯ ಕಾರ್ಯ ಅನಾಥ ಶವಗಳ ಅಂತ್ಯಕ್ರಿಯೆ ಮಾಡಿಸಿ ಚಿತಾಭಸ್ಮ ವಿಸರ್ಜನೆ ಮಾಡಿದ್ದ ಆರ್ ಅಶೋಕ್ ಇದೀಗ ಪಿತೃಪಕ್ಷದ ನಿಮಿತ್ತ ಪಿಂಡ ಪ್ರದಾನ

ಬೆಂಗಳೂರು (ಅ.01):   ಚಿತಾಭಸ್ಮ ವಿಸರ್ಜನೆ ಮಾಡಿದ್ದ ಕಂದಾಯ ಸಚಿವ ಆರ್. ಅಶೋಕ್‌ (R Ashok) ರಿಂದ ಮತ್ತೊಂದು ಮಾನವೀಯ ಕಾರ್ಯ ನಡೆಯುತ್ತಿದೆ. 

ಅನಾಥ ಶವಗಳ (Orphan Bodies) ಅಂತ್ಯಕ್ರಿಯೆ ಮಾಡಿಸಿ ಚಿತಾಭಸ್ಮ ವಿಸರ್ಜನೆ ಮಾಡಿದ್ದ ಆರ್ ಅಶೋಕ್ ಇದೀಗ ಪಿತೃಪಕ್ಷದ ನಿಮಿತ್ತ ಪಿಂಡ ಪ್ರದಾನ (Pinda Pradan) ಮಾಡಲು ತಿರ್ಮಾನ ಮಾಡಿದ್ದಾರೆ. 

ಅಕ್ಟೋಬರ್ 4 ರಂದು ಶ್ರೀರಂಗಪಟ್ಟಣದ (Shrirangapattana) ಕಾವೇರಿ ಘಾಟ್ (Cauvery Ghat) ನಲ್ಲಿ ಪಿಂಡ ಪ್ರದಾನ ಮಾಡಲು ತಿರ್ಮಾನ ಮಾಡಿದ್ದಾರೆ. ಹಿಂದು ಸಂಪ್ರದಾಯದಂತೆ ಪಿತೃಪಕ್ಷದಲ್ಲಿ ಪಿಂಡ ಪ್ರದಾನ ಮಾಡುವ ಮಹತ್ವದ ಕಾರ್ಯ ಮಾಡಲಿರುವ ಅಶೋಕ್,  ಭಾನುಪ್ರಕಾಶ್ ಶರ್ಮಾ (Bhanuprakash Sharma) ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನ ನೆರವೇರಿಸಲಿದ್ದಾರೆ.

ಯೂತ್ ಕಾಂಗ್ರೆಸ್‌ನಿಂದ ಹರಿದ್ವಾರದಲ್ಲಿ 500 ಅನಾಥ ಅಸ್ಥಿ ವಿಸರ್ಜನೆ

ಪಿಂಡ ಪ್ರದಾನ ಮಾಡಿ ಕೋವಿಡ್ ವೇಳೆ ಮೃತಪಟ್ಟು ಅನಾಥವಾಗಿದ್ದವರ ಆತ್ಮಗಳಿಗೆ ಸದ್ಗತಿಗಾಗಿ ಪ್ರಾರ್ಥನೆ ಮಾಡಲಿದ್ದಾರೆ.  ಕೊರೋನಾ (corona) ಸಂದರ್ಭದಲ್ಲಿ ಸರ್ಕಾರ ಅನಾಥ ಶವಗಳಿಗೆ ಮುಕ್ತಿ ಕಾಣಿಸುವ ಕಾರ್ಯವನ್ನು ಕೈಗೆತ್ತಿಕೊಂಡಿತ್ತು. ಈ ವೇಳೆ ಸಚಿವ ಅಶೋಕ್ ಅವರು ಇದರ ಮುಂದಾಳತ್ವವನ್ನು ವಹಿಸಿಕೊಂಡು ನಡೆಸಿದ್ದರು. ಅದರಂತೆ ಇದೀಗ ಪಿಂಡ ಪ್ರದಾನ ಕಾರ್ಯವನ್ನು ಮಾಡುತ್ತಿದ್ದಾರೆ. ಇದರಿಂದ ಮೃತರ ಆತ್ಮಗಳಿಗೆ ಮುಕ್ತಿ ದೊರೆಯುತ್ತದೆ ಎನ್ನುವುದು ಹಿಂದೂ ಧಾರ್ಮಿಕ ನಂಬಿಕೆ ಆಗಿದೆ. 

ಅಂತ್ಯಕ್ರಿಯೆ ಮಾಡಿದ್ದರು : 

ಬೆಂಗಳೂರಿನ (Bengaluru) ಚಿತಗಾರಗಳಲ್ಲಿ ನಡೆದಿದ್ದ ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಯ ಅಸ್ಥಿ ಪಡೆಯಲು ಸಂಬಂಧಿಕರು ಬಂದಿಲ್ಲ.   ಕೊರೋನಾ ಸೋಂಕಿತರ ಮರಣ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಅಧಿಕವಾಗಿತ್ತು. ಸೋಂಕಿತರ ಸಂಖ್ಯೆಯೂ ಹೆಚ್ಚಾಗಿತ್ತು. ಆ ವೇಳೆ, ಅಂತ್ಯಕ್ರಿಯೆ ಬಳಿಕ ಅಸ್ಥಿ ಪಡೆಯಲು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ಮುಕ್ತಿ ಕಾರ್ಯ ನಡೆಸಿಕೊಡಲಾಗಿತ್ತು. 

ಕೊರೋನಾದಿಂದ ಮೃತಪಟ್ಟ ಸಾವಿರಕ್ಕೂ ಹೆಚ್ಚು ಮಂದಿಯ ಅಸ್ಥಿ ವಿಸರ್ಜನೆ ಮಾಡಿದ ಅಶೋಕ್

12ಕ್ಕೂ ಹೆಚ್ಚು ಪುರೋಹಿತರಿಂದ ಕೊವಿಡ್ ಮೃತರಿಗೆ ಶ್ರದ್ಧಾ ಕಾರ್ಯ ನೆರವೇರಿಸಿದ್ದರು. ಕರ್ನಾಟಕ ಸರ್ಕಾರದ ಪರವಾಗಿ ಸಚಿವ ಆರ್ ಅಶೋಕ್ ಸಂಕಲ್ಪಕ್ಕೆ ಕುಳಿತು ಕಾರ್ಯಕ್ರಮ ನಡೆಸಿಕೊಟ್ಟಿದ್ದರು.  ಶ್ರೀ ಕಾಶಿ ವಿಶ್ವೇಶ್ವರ ದೇವಾಲಯ ಸಮೀಪದ ಕಾವೇರಿ ನದಿ ಬಳಿ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ಕಾರ್ಯಗಳೊಂದಿಗೆ ಅಸ್ಥಿ ವಿಸರ್ಜನಾ ಕಾರ್ಯಕ್ರಮ ನಡೆದಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ