ನನ್ನ ಇಲಾಖೆಯಲ್ಲಿ ಇತರೆ ಸಚಿವರ ಹಸ್ತಕ್ಷೇಪ ಹೆಚ್ಚಾಗಿದೆ: ಸಚಿವ ಶ್ರೀರಾಮುಲು ಬೇಸರ?

Published : Jul 24, 2020, 01:31 PM IST
ನನ್ನ ಇಲಾಖೆಯಲ್ಲಿ ಇತರೆ ಸಚಿವರ ಹಸ್ತಕ್ಷೇಪ ಹೆಚ್ಚಾಗಿದೆ: ಸಚಿವ ಶ್ರೀರಾಮುಲು ಬೇಸರ?

ಸಾರಾಂಶ

ಇತರ ಸಚಿವರ ಬಗ್ಗೆ  ಸಚಿವ ಶ್ರೀರಾಮುಲು ಬೇಸರ| ನನ್ನನ್ನು ಓವರ್‌ಟೇಕ್‌ ಮಾಡಲು ಯತ್ನ| ಸಂಪುಟ ಸಭೆಯಲ್ಲಿ ಸಿಎಂ ಮುಂದೇ ಅಸಮಾಧಾನ| ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ನಿರ್ದೇಶಕರ ಹಸ್ತಕ್ಷೇಪದ ಬಗ್ಗೆಯೂ ಬೇಸರ| 

ಬೆಂಗಳೂರು(ಜು.24): ನನ್ನ ಇಲಾಖೆಯಲ್ಲಿ ಇತರೆ ಸಚಿವರ ಹಸ್ತಕ್ಷೇಪ ಹೆಚ್ಚಾಗಿದ್ದು, ಪ್ರತಿಯೊಂದು ವಿಚಾರದಲ್ಲಿಯೂ ನನ್ನನ್ನು ಓವರ್‌ ಟೇಕ್‌ ಮಾಡಲಾಗುತ್ತಿದೆ ಎಂದು ರಾಜ್ಯ ಟಾಸ್ಕ್‌ ಫೋರ್ಸ್‌ ಅಧ್ಯಕ್ಷರೂ ಆಗಿರುವ ಆರೋಗ್ಯ ಸಚಿವ ಬಿ.ಶ್ರೀರಾಮುಲು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತಮ್ಮ ಸಹೋದ್ಯೋಗಿ ಸಚಿವರ ನಡೆಯ ಬಗ್ಗೆ ಬೇಸರ ಹೊರಹಾಕಿದರು ಎಂದು ಮೂಲಗಳು ತಿಳಿಸಿವೆ.

ರಾಜ್ಯವನ್ನು ದೇವರೇ ಕಾಪಾಡಬೇಕು ಎಂದ ಶ್ರೀರಾಮಲು: ಸಿಎಂ ರಾಜೀನಾಮೆಗೆ ಸಿದ್ದು, ಡಿಕೆಶಿ ಆಗ್ರಹ

ಪ್ರತಿಯೊಂದು ವಿಚಾರದಲ್ಲಿಯೂ ನನ್ನನ್ನು ಓವರ್‌ ಟೇಕ್‌ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆ ನನಗೇನೂ ಹೊಸತಲ್ಲ. ಹಿಂದೆಯೂ ಆರೋಗ್ಯ ಇಲಾಖೆ ನಿಭಾಯಿಸಿದ ಅನುಭವ ಇದೆ. ಆದರೆ, ಈ ಬಾರಿ ಇಲಾಖೆಯಲ್ಲಿ ಅಧಿಕಾರಿಗಳ, ಇತರೆ ಸಚಿವರ ಹಸ್ತಕ್ಷೇಪ ಜಾಸ್ತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ. ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ನಿರ್ದೇಶಕರ ಹಸ್ತಕ್ಷೇಪದ ಬಗ್ಗೆಯೂ ಅಸಮಾಧಾನ ಹೊರಹಾಕಿದರು ಎನ್ನಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

KSRTC ಪ್ರಯಾಣಿಕರಿಗೆ ಬಿಗ್ ಶಾಕ್! ಇಂಧನ ಬೆಲೆ ಏರಿಕೆ ನೆಪ, ಶೀಘ್ರ ಬಸ್‌ ದರ ಹೆಚ್ಚಳ, ಸಾರಿಗೆ ಸಚಿವ ಮಹತ್ವದ ಸುಳಿವು
80ನೇ ಸ್ವಾತಂತ್ರ್ಯ ದಿನ: 72,000 ಸರ್ಕಾರಿ ನೌಕರಿ, ಉಚಿತ ಕೋಡಿಂಗ್, AI ವಿವಿ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್!