ಕೃಷಿ ವಿಜ್ಞಾನಿ ಸ್ವಾಮಿನಾಥನ್‌ ಬದುಕಿರುವಾಗ್ಲೇ‌ ಸಂತಾಪ: ಸಚಿವ ಬಸವರಾಜ್ ಬೊಮ್ಮಾಯಿ ಎಡವಟ್ಟು

Published : May 24, 2020, 10:32 PM IST
ಕೃಷಿ ವಿಜ್ಞಾನಿ ಸ್ವಾಮಿನಾಥನ್‌ ಬದುಕಿರುವಾಗ್ಲೇ‌ ಸಂತಾಪ: ಸಚಿವ ಬಸವರಾಜ್ ಬೊಮ್ಮಾಯಿ ಎಡವಟ್ಟು

ಸಾರಾಂಶ

ಕೃಷಿ ವಿಜ್ಞಾನಿ ಸ್ವಾಮಿನಾಥನ್‌ ಬದುಕಿರುವಾಗ್ಲೇ ಸಚಿವ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿ ಎಡವಟ್ಟು ಮಾಡಿಕೊಂಡಿಕೊಂಡಿರುವ ಘಟನೆ ನಡೆದಿದೆ. 

ಬೆಂಗಳೂರು, (ಮೇ.24): ಕೃಷಿ ವಿಜ್ಞಾನಿ, ಹಸಿರು ಕ್ರಾಂತಿಯ ಹರಿಕಾರ ಡಾ. ಎಂ.ಎಸ್.ಸ್ವಾಮಿನಾಥನ್ ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಹಬ್ಬಿದೆ.

ಇದು ಸುಳ್ಳು ಸುದ್ದಿ, ಸ್ವಾಮಿನಾಥನ್(94) ಅವರು ಆರೋಗ್ಯವಾಗಿದ್ದಾರೆ ಎಂದು ಎಂಎಸ್ ಸ್ವಾಮಿನಾಥನ್ ಟ್ರಸ್ಟ್ ಸ್ಪಷ್ಟಪಡಿಸಿದೆ. ಆದ್ರೆ ಕರ್ನಾಟಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ವಾಮಿನಾಥನ್ ನಿಧನಕ್ಕೆ ಸಂತಾಪ ಸೂಚಿಸಿ ಎಡವಟ್ಟು ಮಾಡಿಕೊಂಡಿದ್ದಾರೆ.

''ಕೃಷಿ ವಿಜ್ಞಾನಿ ಡಾ|| ಎಂ. ಎಸ್. ಸ್ವಾಮಿನಾಥನ್ ನಿಧನರಾಗಿದ್ದಾರೆ'' ಎಂದು ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿ ಶ್ರದ್ಧಾಂಜಲಿ ಅರ್ಪಿಸಿದ್ದು ಗೊಂದಲ ಹೆಚ್ಚಾಗುವಂತೆ ಮಾಡಿತ್ತು.

ಆದರೆ, ಟ್ವೀಟ್ ವೊಂದಕ್ಕೆ ಪ್ರತಿಕ್ರಿಯಿಸಿರುವ ಎಂಎಸ್ ಸ್ವಾಮಿನಾಥನ್ ಟ್ರಸ್ಟ್, ಡಾ.ಎಂಎಸ್ ಎಸ್ ಆರೋಗ್ಯವಾಗಿದ್ದು, ಸಕ್ರಿಯವಾಗಿ ತಮ್ಮ ದೈನಂದಿನ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಹೇಳಿದೆ.

ನಂತರ ಬಸವರಾಜ್ ಬೊಮ್ಮಾಯಿ ತಪ್ಪಿನ ಅರಿವಾಗಿ, ಹಳೆ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಅಲ್ಲದೇ ಕ್ಷಮೆಯಾಚಿಸಿ ಮತ್ತೊಂದು ಟ್ವೀಟ್ ಮಾಡಿ ವಿಷಾದ ವ್ಯಕ್ತಪಡಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!