
ಬೆಂಗಳೂರು (ಜು.13): ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಗೆ ಹರಡುವಿಕೆಗೆ ನಿಯಂತ್ರಿಸುವ ಸಲುವಾಗಿ ರಾಜ್ಯದ ಗಡಿ ಭಾಗಗಳಲ್ಲಿ ಬಿಗಿ ಕ್ರಮಗಳನ್ನು ಜರುಗಿಸುವಂತೆ ಗಡಿ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ಸೋಮವಾರ ರಾತ್ರಿ ವಿಡಿಯೋ ಕಾನ್ಫೆರನ್ಸ್ ಮೂಲಕ ರಾಜ್ಯದ ಗಡಿ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು, ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವವರಿಗೆ ಕೊರೋನಾ ತಪಾಸಣೆ ನಡೆಸುವಂತೆ ಪೊಲೀಸರಿಗೆ ತಿಳಿಸಿದರು. ಗಡಿ ಭಾಗದ ಚೆಕ್ ಪೋಸ್ಟ್ಗಳಲ್ಲೇ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಜನರು ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಆರ್ಟಿಪಿಸಿಆರ್ ನೆಗೆಟಿವ್ ವರದಿ ನೀಡುವಂತೆ ಜನರಿಗೆ ಸೂಚಿಸಬೇಕು. ಸೋಂಕಿನ ಲಕ್ಷಣಗಳು ಕಂಡುಬಂದರೆ ಕೂಡಲೇ ಅಂತಹವರ ಗಂಟಲು ದ್ರವ ಪರೀಕ್ಷೆಗೆ ಗಡಿಯಲ್ಲೇ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು.
'ಎಚ್ಚರ.. 3ನೇ ಅಲೆ ಸನ್ನಿಹಿತ: ಪ್ರವಾಸ, ಯಾತ್ರೆ, ಧಾರ್ಮಿಕ ಉತ್ಸವ ಮುಂದೂಡಿ!'
ಕಳೆದ ಬಾರಿ ಆ ಎರಡು ರಾಜ್ಯಗಳಿಂದ ಬಂದ ಜನರಿಂದಲೇ ರಾಜ್ಯದಲ್ಲಿ ಸೋಂಕು ಹರಡಿತು. ಈ ಬಾರಿ ಕಳೆದ ಬಾರಿಯಂತೆ ತಪ್ಪಾಗದಂತೆ ಗಡಿಗಳಲ್ಲಿ ಮುನ್ನಚ್ಚರಿಕೆ ವಹಿಸಬೇಕು ಎಂದು ಸಚಿವರು ತಾಕೀತು ಮಾಡಿದರು. ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ