ವೀಕೆಂಡ್​​​ ಕರ್ಫ್ಯೂ ಮುಂದುವರಿಯುತ್ತಾ? ಇಲ್ಲಾ? ಬೊಮ್ಮಾಯಿ ಹೇಳಿದ್ದು ಹೀಗೆ

Published : Apr 25, 2021, 04:12 PM ISTUpdated : Apr 25, 2021, 04:47 PM IST
ವೀಕೆಂಡ್​​​ ಕರ್ಫ್ಯೂ ಮುಂದುವರಿಯುತ್ತಾ? ಇಲ್ಲಾ? ಬೊಮ್ಮಾಯಿ ಹೇಳಿದ್ದು ಹೀಗೆ

ಸಾರಾಂಶ

ವೀಕೆಂಡ್​ ಕರ್ಫ್ಯೂ ಮುಂದುವರಿಸಬೇಕೋ? ಬೇಡವೋ ಎನ್ನುವ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರು, (ಏ.25): ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಕಟ್ಟಿಹಾಕಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ.  ಆದ್ರೂ ಸಹ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.

ಇನ್ನು ವೀಕೆಂಡ್​ ಕರ್ಫ್ಯೂ ಮುಂದುವರಿಕೆ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು,  ವೀಕೆಂಡ್​​​ ಕರ್ಫ್ಯೂ ಮುಂದುವರಿಸುವ ಬಗ್ಗೆ ಸದ್ಯಕ್ಕೆ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಸದ್ಯ ವೀಕೆಂಡ್​ ಕರ್ಫ್ಯೂ ಯಶಸ್ವಿಯಾಗಿದೆ. ಕೇಂದ್ರ ಸರ್ಕಾರ ರಾಜ್ಯದ ಆಕ್ಸಿಜನ್​ ಪಾಲನ್ನ ಹೆಚ್ಚಾಸಿದೆ, 300 ಮೆಟ್ರಿಕ್​ ಟನ್​ಗಳಿಂದ 800 ಮೆಟ್ರಿಕ್​ ಟನ್​ ಆಕ್ಸಿಜನ್ನನ್ನು ರಾಜ್ಯಕ್ಕೆ ಹೆಚ್ಚುವರಿಯಾಗಿ ನೀಡಲು ಕೇಂದ್ರ ಒಪ್ಪಿದೆ. ನಿನ್ನೆ (ಶನಿವಾರ) ಸಂಜೆ ಮುಖ್ಯಮಂತ್ರಿಗಳ ಜೊತೆ ಈ ಸಂಬಂಧ ಸಭೆ ನಡೆಸಲಾಯಿತು, ಈ ವೇಳೆಯೇ ಕೇಂದ್ರ ಸರ್ಕಾರದಿಂದ ಭರವಸೆ ಸಿಕ್ಕಿರುವ ಬಗ್ಗೆ ಸಿಎಂ ಮಾಹಿತಿ ನೀಡಿದರು ಎಂದು ಹೇಳಿದರು.. 

ಕರ್ನಾಟಕದಲ್ಲಿ ಮತ್ತಷ್ಟು ಟಫ್ ರೂಲ್ಸ್: ಮುಂಬೈ ಮಾದರಿಯಲ್ಲಿ ಕ್ರಮ!

ನಿನ್ನೆ (ಶನಿವಾರ) ನಡೆದ ಸಭೆಯಲ್ಲಿ ವೀಕೆಂಡ್​ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ಈಗಿರುವ ಮಾರ್ಗಸೂಚಿಗಳೇ ಮುಂದುವರಿಯಲಿವೆ, ರೆಮಿಡಿಸಿವರ್​ ​ ಸಮಸ್ಯೆ ಬಗೆಹರಿಸಿದ್ದೇವೆ ಎಂದು ತಿಳಿಸಿದರು.

ಕೋವ್ಯಾಕ್ಸಿನ್​, ಕೋವಿಡ್​ ಶೀಲ್ಡ್​ ಲಸಿಕೆ ಎರಡನೇ ಡೋಸ್​ ಕೊರತೆ ವಿಚಾರವಾಗಿ ಮಾತನಾಡಿ ,ಇದು ನಮ್ಮ ಗಮನಕ್ಕೆ ಬಂದಿದೆ. ಈ ಸಮಸ್ಯೆ ಕೂಡ ಬಗೆಹರಿಯಲಿದೆ. ಮೇ 1 ರಿಂದ 18 ವರ್ಷದ ಮೇಲ್ಪಟ್ಟವರಿಗೆ ಮೊದಲನೇ ಡೋಸ್​ ವಿತರಣೆಯಾಗಲಿದೆ. 45 ನೇ ವರ್ಷ ವಯಸ್ಕರಿಗೆ ಎರಡನೇ ಹಂತದ ಲಸಿಕೆ ನೀಡುತ್ತೇವೆ. ರೆಮ್ಡಿಸಿವರ್​ ಇಂಜೆಕ್ಷನ್​ ಕೂಡ ಎಲ್ಲಾ ಜಿಲ್ಲೆಗಳಿಗೆ ಪೂರೈಕೆ ಮಾಡ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!