ರೈತರ ಆದಾಯ ದ್ವಿಗುಣಕ್ಕೆ ಸಚಿವ ಬಿ.ಸಿ. ಪಾಟೀಲ್‌ ಸೂಚನೆ

Published : Jun 17, 2022, 04:00 AM IST
ರೈತರ ಆದಾಯ ದ್ವಿಗುಣಕ್ಕೆ ಸಚಿವ ಬಿ.ಸಿ. ಪಾಟೀಲ್‌ ಸೂಚನೆ

ಸಾರಾಂಶ

*    ಕೃಷಿ ವಿವಿಗಳು ಕೇವಲ ಪುಸ್ತಕದಲ್ಲಿರುವುದನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರೆ ಸಾಲದು *   ಸಮಸ್ಯೆಗಳಿಗೆ ವೈದ್ಯರ ಮಾದರಿಯಲ್ಲಿ ಅವುಗಳನ್ನು ಪರಿಹರಿಸುವ ಕಾರ್ಯ ಮಾಡಬೇಕು *   ಆಗಬೇಕಿರುವ ಸುಧಾರಣಾ ಕ್ರಮಗಳಿಗೆ ರಾಜ್ಯದ ಪ್ರಗತಿಪರ ರೈತರ ನೆರವನ್ನೂ ಪಡೆದುಕೊಳ್ಳಬೇಕು

ಬೆಂಗಳೂರು(ಜೂ.17): ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ಕೃಷಿ ವಿಶ್ವವಿದ್ಯಾಲಯಗಳು, ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯೂ ಶ್ರಮಿಸಬೇಕು, ಈ ನಿಟ್ಟಿನಲ್ಲಿ ಆಗಬೇಕಿರುವ ಸುಧಾರಣಾ ಕ್ರಮಗಳಿಗೆ ರಾಜ್ಯದ ಪ್ರಗತಿಪರ ರೈತರ ನೆರವನ್ನೂ ಪಡೆದುಕೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಉನ್ನತಾಧಿಕಾರಿಗಳೊಂದಿಗೆ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕೃಷಿ ವಿವಿಗಳು ಕೇವಲ ಪುಸ್ತಕದಲ್ಲಿರುವುದನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರೆ ಸಾಲದು. ಕುಲಪತಿ ಸೇರಿದಂತೆ ವಿವಿಗಳ ಎಲ್ಲ ಅಧಿಕಾರಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿಗಳನ್ನು ಕರೆದುಕೊಂಡು ರೈತರ ಹೊಲಗಳಿಗೆ ಹೋಗಬೇಕು. ಕೃಷಿ ಕ್ಷೇತ್ರದ ನೈಜ ಸವಾಲುಗಳೇನು, ರೈತರು ಎದುರಿಸುತ್ತಿರುವ ಸಮಸ್ಯೆಗಳೇನು ಎಂಬುದನ್ನು ಮಕ್ಕಳಿಗೆ ಮನವರಿಕೆ ಕೊಟ್ಟು ವೈದ್ಯರ ಮಾದರಿಯಲ್ಲಿ ಅವುಗಳನ್ನು ಪರಿಹರಿಸುವ ಕಾರ್ಯ ಮಾಡಬೇಕು ಎಂದರು.

Chitradurga: ಕಾಂಗ್ರೆಸ್ ಪ್ರತಿಭಟನೆ ಅವರ ಮೂರ್ಖತನದ ಪರಮಾವಧಿ: ಸಚಿವ ಬಿ.ಸಿ ಪಾಟೀಲ್

ಸಭೆಯಲ್ಲಿ ಕೃಷಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಶಿವಯೋಗಿ ಸಿ.ಕಳಸದ, ಕೃಷಿ ಆಯುಕ್ತ ಶರತ್‌, ನಿರ್ದೇಶಕಿ ನಂದಿನಿ ಕುಮಾರಿ ಮತ್ತಿತರರು ಉಪಸ್ಥಿರಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ
ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!