ಮುಡಾ ದಾಖಲೆ ತಿದ್ದುವಂತಹ ನೀಚ ಕೆಲಸ ಮಾಡಿಲ್ಲ: ಸಚಿವ ಬೈರತಿ ಸುರೇಶ್

Published : Aug 22, 2024, 10:19 AM IST
ಮುಡಾ ದಾಖಲೆ ತಿದ್ದುವಂತಹ ನೀಚ ಕೆಲಸ ಮಾಡಿಲ್ಲ: ಸಚಿವ ಬೈರತಿ ಸುರೇಶ್

ಸಾರಾಂಶ

ಸ್ವಾಧೀನಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡಿಲ್ಲ. ಹಾಗಾಗಿ ಅಷ್ಟೇ ವಿಸ್ತೀರ್ಣದ ಜಮೀನು ನೀಡಿ, ಇಲ್ಲವೇ ಸಮಾನಾಂತರ ಬಡಾವಣೆಯಲ್ಲಿ ನಿವೇಶನ ನೀಡುವಂತೆ ಸಿದ್ದರಾಮಯ್ಯ ಅವರ ಪತ್ನಿ ಸ್ಪಷ್ಟವಾಗಿ ಕೇಳಿದ್ದಾರೆ. ವರ್ಷ ನಮೂದಿಸುವುದರಲ್ಲಿ ತಪ್ಪಾಗಿರಬಹುದು, ವಿಜಯನಗರ ಲೇಔಟ್‌ನಲ್ಲಿ ನೀಡಿ ಎಂದು ಎಲ್ಲಿ ಬರೆದಿದ್ದಾರೆ. ಮಾಧ್ಯಮಗಳು ಎಲ್ಲವನ್ನು ನೋಡಿ ಹಾಕಬೇಕು ಎಂದ ಸಚಿವ ಬೈರತಿ ಸುರೇಶ್

ಬೆಂಗಳೂರು(ಆ.22):  ಮುಡಾ ಪ್ರಕರಣದಲ್ಲಿ ದಾಖಲೆ ತಿದ್ದುವಂತಹ ನೀಚ ಕೃತ್ಯವನ್ನು ಯಾರೂ ಮಾಡಿಲ್ಲ. ಅಂತಹ ಪರಿಸ್ಥಿತಿ ಬಂದಿಲ್ಲ. ಈ ಬಗ್ಗೆ ಯಾವುದೇ ದಾಖಲೆ ಇದ್ದರೆ ಎಚ್.ಡಿ. ಕುಮಾರಸ್ವಾಮಿ ಕೋರ್ಟ್‌ಗೆ ಸಲ್ಲಿಸಲಿ ಎಂದು ಸಚಿವ ಬೈರತಿ ಸುರೇಶ್ ಪ್ರತಿಕ್ರಿಯಿಸಿದ್ದಾರೆ. 

ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಸ್ವಾಧೀನಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡಿಲ್ಲ. ಹಾಗಾಗಿ ಅಷ್ಟೇ ವಿಸ್ತೀರ್ಣದ ಜಮೀನು ನೀಡಿ, ಇಲ್ಲವೇ ಸಮಾನಾಂತರ ಬಡಾವಣೆಯಲ್ಲಿ ನಿವೇಶನ ನೀಡುವಂತೆ ಸಿದ್ದರಾಮಯ್ಯ ಅವರ ಪತ್ನಿ ಸ್ಪಷ್ಟವಾಗಿ ಕೇಳಿದ್ದಾರೆ. ವರ್ಷ ನಮೂದಿಸುವುದರಲ್ಲಿ ತಪ್ಪಾಗಿರಬಹುದು, ವಿಜಯನಗರ ಲೇಔಟ್‌ನಲ್ಲಿ ನೀಡಿ ಎಂದು ಎಲ್ಲಿ ಬರೆದಿದ್ದಾರೆ. ಮಾಧ್ಯಮಗಳು ಎಲ್ಲವನ್ನು ನೋಡಿ ಹಾಕಬೇಕು ಎಂದರು. 

ಮುಡಾ ದಾಖಲೆ ಕಾಪ್ಟರ್‌ನಲ್ಲಿ ತಂದು ತಿದ್ದಿದ್ದಾರೆ: ಕೇಂದ್ರ ಕೈಗಾರಿಕಾ ಸಚಿವ ಕುಮಾರಸ್ವಾಮಿ

ಪ್ರಕರಣದ ಸಂಬಂಧ ಕುಮಾರಸ್ವಾಮಿ ಅವರ ಬಳಿ ಏನೇ ದಾಖಲೆ ಇದ್ದರೂ ಅದನ್ನು ಕೋರ್ಟ್‌ಗೆ ಸಲ್ಲಿಸಲಿ. ಅದನ್ನು ಕೋರ್ಟ್ ಪರಿಗಣಿಸುವುದಿಲ್ಲವೇ? ನ್ಯಾಯಾಧೀಶರೇ ಬಗೆಹರಿಸುತ್ತೇನೆ ಖುದ್ದು ಎಂದಿದ್ದಾರೆ. ಅಲ್ಲಿವರೆಗೆ ಕಾಯಲು ಏನಾಗಿದೆ ಎಂದು ಅವರು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Karnataka News Live: ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್