ಯಾವುದೇ ಸಮುದಾಯದ ಮೀಸಲಾತಿ ಹೋರಾಟಕ್ಕೂ ನನ್ನ ಬೆಂಬಲವಿಲ್ಲ: ಯೋಗೇಶ್ವರ್‌

Kannadaprabha News   | Asianet News
Published : Feb 21, 2021, 09:21 AM IST
ಯಾವುದೇ ಸಮುದಾಯದ ಮೀಸಲಾತಿ ಹೋರಾಟಕ್ಕೂ ನನ್ನ ಬೆಂಬಲವಿಲ್ಲ: ಯೋಗೇಶ್ವರ್‌

ಸಾರಾಂಶ

ಮೀಸಲಾತಿ ಎಲ್ಲ ಸಮುದಾಯಗಳೂ ಕೇಳಲಾರಂಭಿಸಿವೆ| ಮೀಸಲಾತಿಗೆ ಸಂಬಂಧಿಸಿದ ನಿರ್ಧಾರಗಳು ಸಂವಿಧಾನದ ಚೌಕಟ್ಟಿನಲ್ಲೇ ಆಗಬೇಕಿದೆ| ತರಾತುರಿಯಲ್ಲಿ ಯಾವುದನ್ನೂ ಮಾಡಲು ಆಗಲ್ಲ| ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಒಂದು ಸಮಿತಿ ರಚನೆ| 

ಬೆಂಗಳೂರು(ಫೆ.21):  ಒಕ್ಕಲಿಗ ಸೇರಿದಂತೆ ಯಾವುದೇ ಸಮುದಾಯದ ಮೀಸಲಾತಿ ಹೋರಾಟಕ್ಕೂ ನನ್ನ ಬೆಂಬಲ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ.

ವಿಧಾನಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿ ವೇಳೆ ಮೀಸಲಾತಿಗೆ ಕೇಳಿಬರುತ್ತಿರುವ ಒತ್ತಾಯ, ಹೋರಾಟಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಮೀಸಲಾತಿ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ. ಹಲವಾರು ಬಾರಿ ಇಂತಹ ಹೋರಾಟಗಳು ನಡೆದಿವೆ. ಮೀಸಲಾತಿಯನ್ನು ಎಲ್ಲ ಸಮುದಾಯಗಳೂ ಕೇಳಲಾರಂಭಿಸಿವೆ. ಮೀಸಲಾತಿಗೆ ಸಂಬಂಧಿಸಿದ ನಿರ್ಧಾರಗಳು ಸಂವಿಧಾನದ ಚೌಕಟ್ಟಿನಲ್ಲೇ ಆಗಬೇಕಿದೆ. ತರಾತುರಿಯಲ್ಲಿ ಯಾವುದನ್ನೂ ಮಾಡಲು ಆಗಲ್ಲ ಎಂದರು.

ಪಂಚಮಸಾಲಿ 2ಎಗೆ ಸೇರಿಸಿದರೆ ಇತರರಿಗೆ ಅನ್ಯಾಯ!

ಮೀಸಲಾತಿಗಾಗಿ ಒಕ್ಕಲಿಗರ ಸಮುದಾಯವೂ ಬೇಡಿಕೆ ಇಟ್ಟಿದೆಯಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಒಕ್ಕಲಿಗರು ನಾವ್ಯಾರೂ ಬೀದಿಗೆ ಬಂದು ಇಳಿದಿಲ್ಲ. ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಒಂದು ಸಮಿತಿ ರಚನೆಯಾಗಲಿದೆ. ನೋಡೋಣ ಮುಂದೆ ಏನಾಗುತ್ತದೆ ಅಂತ. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ನನ್ನನ್ನು ಕರೆದು ಚರ್ಚೆ ಮಾಡಿದರೆ ಅವರ ನಡೆ, ನಿರ್ದೇಶನವನ್ನು ಆಧರಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ