
ಬೆಳಗಾವಿ(ನ.23): ಬಳ್ಳಾರಿ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಕಾಂಗ್ರೆಸ್ ನಾಯಕ, ಸಚಿವ ಡಿಕೆ ಶಿವಕುಮಾರ್, ಇದೀಗ ಮತ್ತೆ ಬೆಳಗಾವಿ ರಾಜಕಾರಣದತ್ತ ಮುಖ ಮಾಡಿದಂತಿದೆ.
ಬಳ್ಳಾರಿ ಗೆಲುವಿನ ಗುಂಗಿನಲ್ಲಿರುವ ಡಿಕೆಶಿ, ಇದೀಗ ಬೆಳಗಾವಿಗೂ ತಮ್ಮ ಪ್ರಭಾವ ವಿಸ್ತರಿಸೋ ಪ್ಲ್ಯಾನ್ ಹಾಕಿಕೊಂಡಂತೆ ಕಾಣುತ್ತಿದೆ. ಇದಕ್ಕೆ ಪುಷ್ಠಿ ಎಂಬಂತೆ ಕಬ್ಬು ಬೆಳೆಗಾರರ ಹೋರಾಟ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರು ಬಾಕಿ ಬಿಲ್ ಪಾವತಿ ಮಾಡುವ ಕುರಿತು ಡಿಕೆಶಿ ತಮ್ಮ ಅಭಿಪ್ರಾಯ ಹೊರ ಹಾಕಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರಾಮಾಣಿಕರಿದ್ದು ರೈತರ ಬಿಲ್ ಕೊಡುತ್ತಾರೆ ಎಂಬ ನಂಬಿಕೆ ತಮಗಿದೆ ಎಂದು ಜಲಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ರೈತರ ಬಾಕಿ ಬಿಲ್ ಕೊಡಲು ರಮೇಶ್ ಜಾರಕಿಹೊಳಿ ಅವರ ಮೇಲೆ ಪರೋಕ್ಷ ಒತ್ತಡ ಹಾಕಿದ್ದಾರೆ ಡಿಕೆಶಿ.
ಬೆಳಗಾವಿಯಲ್ಲಿ ಮಾದ್ಯಮ ಮಿತ್ರರ ಜತೆ ಮಾತನಾಡಿದ ಸಚಿವರು, ಬೆಳಗಾವಿ ಜಿಲ್ಲಾ ಮಂತ್ರಿಗಳು ಆಗಿರುವ ರಮೇಶ್ ಮುಖ್ಯಮಂತ್ರಿಗಳ ಜೊತೆ ಸೇರಿ ರೈತರ ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡುತ್ತಾರೆ ಎಂಬ ವಿಶ್ವಾಸ ಇದೆ ಎಂದು ಹೇಳಿದ್ದಾರೆ.
ಇನ್ನು ಬಿಜೆಪಿಯ ಆರ್. ಅಶೋಕ ಅವರ ಫೋನ್ ಕದ್ದಾಲಿಕೆ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಕೇಂದ್ರದಲ್ಲಿ ಅವರ ಸರ್ಕಾರವೇ ಇದೆ ತನಿಖೆ ಮಾಡಿಸಲಿ ಎಂದು ಟಾಂಗ್ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ