ಕೊರೋನಾದಿಂದ ಗುಣಮುಖ ಆದವರ ಅಧ್ಯಯನಕ್ಕೆ ಸಮಿತಿ ರಚನೆ: ಸುಧಾ​ಕ​ರ್‌

Kannadaprabha News   | Asianet News
Published : Sep 21, 2020, 07:46 AM IST
ಕೊರೋನಾದಿಂದ ಗುಣಮುಖ ಆದವರ ಅಧ್ಯಯನಕ್ಕೆ ಸಮಿತಿ ರಚನೆ: ಸುಧಾ​ಕ​ರ್‌

ಸಾರಾಂಶ

ತಜ್ಞರ ಪ್ರತ್ಯೇಕ ಸಮಿತಿ ರಚನೆ| ಗುಣ​ಮು​ಖರ ಮೇಲಿನ ದೂರ​ಗಾಮಿ ಪರಿ​ಣಾಮ ಅಧ್ಯ​ಯ​ನ| ಅಧ್ಯಯನದ ವರದಿಯ ಆಧಾರದ ಮೇಲೆ ಕೋವಿಡ್‌-19 ರೋಗಿಗಳ ದೂರಗಾಮಿ ಆರೋಗ್ಯದ ದೃಷ್ಟಿಯಿಂದ ಸೂಕ್ತ ಚಿಕಿತ್ಸಾ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಸಹಕಾರಿ| 

ಬೆಂಗಳೂರು(ಸೆ.21): ಕೊರೋನಾ ಸೋಂಕಿನಿಂದ ಗುಣಮುಖರಾದವರ ಮೇಲೆ ಉಂಟಾಗಬಹುದಾದ ದೂರಗಾಮಿ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಸಚಿವರು, ಕೋವಿಡ್‌ ಸೋಂಕು ತಗುಲಿ ಗುಣಮುಖರಾದವರ ಆರೋಗ್ಯದ ಮೇಲೆ ಭವಿಷ್ಯದಲ್ಲಿ ಏನಾದರೂ ಪರಿಣಾಮಗಳು ಉಂಟಾಗಬಹುದೇ ಎಂಬ ಅನುಮಾನಗಳು ಸಮಾಜವನ್ನು ಕಾಡಲಾರಂಭಿಸಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

50 ದಿನದಲ್ಲಿ 1.35 ಲಕ್ಷ ಜನರಿಗೆ ಕೊರೋನಾ ಸೋಂಕು: ಆತಂಕದಲ್ಲಿ ಬೆಂಗಳೂರಿನ ಜನತೆ..!

ಲಘು ಮತ್ತು ತೀವ್ರ ರೋಗ ಲಕ್ಷಣ ಹೊಂದಿರುವ ಮತ್ತು ಇತರೆ ಗಂಭೀರ ರೋಗಗಳಿಂದ ಬಳಲುತ್ತಿದ್ದವರ ಮೇಲೆ ಆಗಬಹುದಾದ ಪರಿಣಾಮಗಳ ಬಗ್ಗೆ ಅಧ್ಯಯನದಿಂದ ತಿಳಿದುಕೊಳ್ಳಬೇಕಿದೆ. ಹಾಗಾಗಿ ತಜ್ಞರ ಸಮಿತಿ ರಚಿಸಿ ಈ ಬಗ್ಗೆ ಅಧ್ಯಯನ ನಡೆಸಲಾಗುವುದು. ಅಧ್ಯಯನದ ವರದಿಯ ಆಧಾರದ ಮೇಲೆ ಕೋವಿಡ್‌-19 ರೋಗಿಗಳ ದೂರಗಾಮಿ ಆರೋಗ್ಯದ ದೃಷ್ಟಿಯಿಂದ ಸೂಕ್ತ ಚಿಕಿತ್ಸಾ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಸಚಿವರು ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ