ಹೆಚ್ಚು ಕೋವಿಡ್‌ ಟೆಸ್ಟ್‌ ಮಾಡಿದರಷ್ಟೇ ಕೊರೋನಾ ನಿಯಂತ್ರಣ ಸಾಧ್ಯ: ಸಚಿವ ಸುಧಾಕರ್

Suvarna News   | Asianet News
Published : Jul 27, 2020, 11:59 AM IST
ಹೆಚ್ಚು ಕೋವಿಡ್‌ ಟೆಸ್ಟ್‌ ಮಾಡಿದರಷ್ಟೇ ಕೊರೋನಾ ನಿಯಂತ್ರಣ ಸಾಧ್ಯ: ಸಚಿವ ಸುಧಾಕರ್

ಸಾರಾಂಶ

ಬೆಂಗಳೂರಿನಲ್ಲಿ ಕೊರೋನಾ ಸೋಂಕು ಪರೀಕ್ಷೆ ವೇಳೆ ಸುಳ್ಳು ಹೆಸರು, ವಿಳಾಸ ಮತ್ತು ತಪ್ಪು ಮೊಬೈಲ್‌ ಸಂಖ್ಯೆ ನೀಡಿರುವ ಮೂರು ಸಾವಿರಕ್ಕೂ ಹೆಚ್ಚು ಮಂದಿ| ಕೊರೋನಾ ತಡೆಯಲು ಸರ್ಕಾರದ ಜೊತೆಗೆ ಜನರ ಸಹಕಾರವೂ ಅಷ್ಟೇ ಮುಖ್ಯ: ಸಚಿವ ಡಾ. ಕೆ. ಸುಧಾಕರ್‌|

ಬೆಂಗಳೂರು(ಜು.27):  ಹೆಚ್ಚು ಕೋವಿಡ್‌ ಟೆಸ್ಟ್‌ ಮಾಡಿದರಷ್ಟೇ ಕೊರೋನಾ ನಿಯಂತ್ರಣ ಸುಲಭವಾಗುತ್ತದೆ. ರಾಜ್ಯದಲ್ಲಿ ಪ್ರತಿದಿನ 30-40 ಸಾವಿರ ಟೆಸ್ಟ್‌ ಮಾಡಲಾಗುತ್ತಿದೆ. ಕೆಲವರು ತಪ್ಪು ವಿಳಾಸ, ತಪ್ಪು ಮೊಬೈಲ್‌ ನಂಬರ್‌ ಕೊಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಡ್ಡಾಯವಾಗಿ ಆಧಾರ್‌, ಐಡಿ ಕಾರ್ಡ್‌ ತೋರಿಸಿ OTP ಬಂದ ಮೇಲೆ ಟೆಸ್ಟ್‌ ಮಾಡಲು ಸೂಚನೆ ನೀಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ. 

ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಪರೀಕ್ಷೆ ವೇಳೆ ಬರೋಬ್ಬರಿ ಮೂರು ಸಾವಿರಕ್ಕೂ ಹೆಚ್ಚು ಮಂದಿ ಸುಳ್ಳು ಹೆಸರು, ವಿಳಾಸ ಮತ್ತು ತಪ್ಪು ಮೊಬೈಲ್‌ ಸಂಖ್ಯೆ ನೀಡಿರುವ ಪ್ರಕರಣಗಳು ಬೆಳಕಿಗೆ ಬಂದಿದೆ.  ಈ ರೀತಿ ಸುಳ್ಳು ಮಾಹಿತಿ ನೀಡಿ ಹೋಗಿರುವುದರಿಂದ ಪರೀಕ್ಷೆಯಲ್ಲಿ ಕೊರೋನಾ ಸೋಂಕು ದೃಢಪಟ್ಟ 3388 ಮಂದಿಯನ್ನು ಪತ್ತೆ ಹಚ್ಚಲು ಬಿಬಿಎಂಪಿಗೆ ಇದುವರೆಗೂ ಸಾಧ್ಯವಾಗಿಲ್ಲ. ಹೀಗಾಗಿ ತಮ್ಮ ಬಳಿ ಇರುವ ವಿವರಗಳನ್ನು ಪೊಲೀಸರಿಗೆ ಒಪ್ಪಿಸಿರುವ ಬಿಬಿಎಂಪಿ, ಅವರನ್ನು ಪತ್ತೆ ಹಚ್ಚಿಕೊಡುವಂತೆ ಕೋರಿದೆ.

ಬೆಂಗಳೂರಲ್ಲಿ 3388 ಕೊರೋನಾ ಸೋಂಕಿತರು ನಾಪತ್ತೆ..!

 

ಹೀಗಾಗಿ ಸಾಮಾಜಿಕ ಜಾಲತಾಣ ಟ್ಟಿಟ್ಟರ್‌ನಲ್ಲಿ ಬರೆದುಕೊಂಡಿರುವ ಸಚಿವರು ಕೊರೋನಾ ವೈರಸ್‌ ಅಟ್ಟಹಾಸವನ್ನ ತಡೆಯಲು ಸರ್ಕಾರದ ಜೊತೆಗೆ ಜನರ ಸಹಕಾರವೂ ಅಷ್ಟೇ ಮುಖ್ಯವಾಗಿದೆ ಎಂದು ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

‘ನೆಕ್ಸ್ಟ್‌ ಸಿಎಂ’ ಬೆಟ್ಟಿಂಗ್‌ ನಿಯಂತ್ರಿಸಿ: ವಿ.ಸುನೀಲ್‌ ಕುಮಾರ್‌ ಆಗ್ರಹ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ಅಗತ್ಯ: ಛಲವಾದಿ ನಾರಾಯಣಸ್ವಾಮಿ