
ಬೆಂಗಳೂರು(ಸೆ.23): ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಮಾಡಿದ್ದ ಲಾಕ್ಡೌನ್ನಿಂದಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಮದ್ಯ ಮಾರಾಟದಲ್ಲಿ ಕುಸಿತ ಕಂಡಿದೆ. ರಾಜ್ಯ ಸರ್ಕಾರಕ್ಕೆ 1,549 ಕೋಟಿ ರು. ಅಬಕಾರಿ ಆದಾಯ ಕಡಿಮೆಯಾಗಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ.
ಗದಗ ಶಾಸಕ ಎಚ್.ಕೆ. ಪಾಟೀಲ್ ಅವರ ಚುಕ್ಕಿ ಗುರುತಿನ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ಲಾಕ್ಡೌನ್ ಅವಧಿಯಿಂದ ಮೇ 3ರವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿರಲಿಲ್ಲ. ಬಳಿಕ ಮೇ 4ರಿಂದ ಸಿಎಲ್-2 ಹಾಗೂ ಸಿಎಲ್-11ಸಿ (ಎಂಎಸ್ಐಎಲ್) ಮಳಿಗೆಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಯಿತು. ಮೇ 4ರಿಂದ ಆಗಸ್ಟ್ 31ರವರೆಗೆ ಭಾರತೀಯ ಮದ್ಯ 198.88 ಲಕ್ಷ ಕೇಸ್, 63 ಲಕ್ಷ ಬಿಯರ್ ಕೇಸ್ಗಳು ಮಾರಾಟವಾಗಿವೆ. ಈ ಮೂಲಕ ಮೇ 4ರಿಂದ ಆಗಸ್ಟ್ 31ರವರೆಗೆ 7,581 ಕೋಟಿ ಅಬಕಾರಿ ರಾಜಸ್ವ ಸಂಗ್ರಹವಾಗಿದೆ ಎಂದರು.
ಮದ್ಯ ಮಾರಾಟಕ್ಕೆ ಬಿತ್ತು ಬ್ರೇಕ್ :ಕಟ್ಟುನಿಟ್ಟಿನ ಆದೇಶ
ಕಳೆದ ವರ್ಷ (2019-20) ಇದೇ ಅವಧಿಗೆ ಒಟ್ಟು 9,131.60 ಕೋಟಿ ಅಬಕಾರಿ ರಾಜಸ್ವ ಸಂಗ್ರಹವಾಗಿತ್ತು. ಹೀಗಾಗಿ ಪ್ರಸಕ್ತ ಸಾಲಿನಲ್ಲಿ ಕೊರೋನಾ ಲಾಕ್ಡೌನ್ನಿಂದಾಗಿ ಶೇ.16.97 ಆದಾಯ ಕುಸಿದಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ