ಕೆಆರ್‌ಎಸ್‌ ಕಟ್ಟಿಸಿದ್ದೇ ಟಿಪ್ಪು ಅಂತ ಹೇಳಿಲ್ಲ : ಮಹದೇವಪ್ಪ

Kannadaprabha News   | Kannada Prabha
Published : Aug 05, 2025, 06:08 AM IST
HC mahadevappa

ಸಾರಾಂಶ

ಕೆಆರ್‌ಎಸ್‌ ಟಿಪ್ಪು ಸುಲ್ತಾನ್‌ ಕಟ್ಟಿಸಿದ್ದು ಎಂದು ನಾನೆಲ್ಲೂ ಹೇಳಿಲ್ಲ. ಕೆಆರ್‌ಎಸ್ ಅಣೆಕಟ್ಟು ನಿರ್ಮಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು. ನನ್ನ ಹೇಳಿಕೆಯನ್ನು ತಿರುಚಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.

ಬೆಂಗಳೂರು : ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌)ವನ್ನು ಟಿಪ್ಪು ಸುಲ್ತಾನ್‌ ಕಟ್ಟಿಸಿದ್ದು ಎಂದು ನಾನೆಲ್ಲೂ ಹೇಳಿಲ್ಲ. ಕೆಆರ್‌ಎಸ್ ಅಣೆಕಟ್ಟು ನಿರ್ಮಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು. ನನ್ನ ಹೇಳಿಕೆಯನ್ನು ತಿರುಚಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಕೊಡುಗೆ ತುಂಬಾ ದೊಡ್ಡದಿದೆ. ಅವರೇ ಕೆಆರ್‌ಎಸ್‌ ಅಣೆಕಟ್ಟನ್ನೂ ನಿರ್ಮಿಸಿದ್ದರು. ಟಿಪ್ಪು ಸುಲ್ತಾನ್‌ ಅವರು ಕಟ್ಟಿಸಿದ್ದರು ಎಂದು ನಾನೆಲ್ಲೂ ಹೇಳಿಲ್ಲ. ಈ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮನವಿ ಮಾಡಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು 1911ರಲ್ಲಿ ಕೆಆರ್‌ಎಸ್‌ ನಿರ್ಮಾಣ ಕಾರ್ಯ ಶುರು ಮಾಡಿದ್ದರು. ಆ ವೇಳೆ ಅಲ್ಲಿ ಒಂದು ಶಿಲಾಶಾಸನ ಪತ್ತೆಯಾಗಿತ್ತು. 1794ನೇ ಇಸವಿಯ ಶಿಲಾಶಾಸನದಲ್ಲಿ ಪರ್ಷಿಯನ್‌ ಬರಹ ಇತ್ತು. ಇದನ್ನು ಕನ್ನಡ ಮತ್ತು ಇಂಗ್ಲೀಷ್‌ಗೆ ತರ್ಜುಮೆ ಮಾಡಿ ಈಗಲೂ ಅಲ್ಲೇ ಇಡಲಾಗಿದೆ. ಇದರಿಂದ ಟಿಪ್ಪು ಸುಲ್ತಾನ್‌ ಅವರಿಗೂ ಕಾವೇರಿ ನೀರನ್ನು ನಿಲ್ಲಿಸಿ ರೈತರ ಉಪಯೋಗಕ್ಕೆ ಏನಾದರೂ ಮಾಡಬೇಕು ಎಂಬ ಯೋಚನೆ ಇತ್ತು ಎಂಬುದು ಗೊತ್ತಾಗುತ್ತದೆ. ಅದನ್ನಷ್ಟೇ ನಾನು ಹೇಳಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಟಿಪ್ಪು ಹೆಸರಿನ ಅಡಿಗಲ್ಲು ಪತ್ತೆಯಾಗಿದ್ದರಿಂದ ಟಿಪ್ಪು ಸುಲ್ತಾನ್‌ ಅವರಿಗಿಂತ ಮೊದಲೇ ಕಾವೇರಿ ನೀರನ್ನು ರೈತರಿಗೆ ನೀಡಲು ಕ್ರಮ ಕೈಗೊಳ್ಳುವ ಉದ್ದೇಶ ಇದ್ದಿರಬಹುದು ಎಂದಿದ್ದೇನೆ. ಇದನ್ನು ಸಂಶೋಧಕರು, ಇತಿಹಾಸಕಾರರು ಹೇಳಬೇಕು. ಆದರೆ ಕೆಆರ್‌ಎಸ್‌ನಂತಹ ದೊಡ್ಡ ಜಲಾಶಯ ನಿರ್ಮಿಸಲು ಟಿಪ್ಪು ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ಈ ವಿನ್ಯಾಸವನ್ನು ವಿಶ್ವೇಶ್ವರಯ್ಯ ಹಾಗೂ ಎಂಜಿನಿಯರ್ ತಂಡ ಮಾಡಿದ್ದು. ಇಂತಹ ದೊಡ್ಡ ಯೋಜನೆಯ ಪರಿಕಲ್ಪನೆ ಟಿಪ್ಪುಗೆ ಇರಲಿಕ್ಕಿಲ್ಲ. ಇಂತಹ ಎಂಜಿನಿಯರಿಂಗ್ ಪರಿಕಲ್ಪನೆಯೂ ಆ ಕಾಲದಲ್ಲಿ ಇರಲಿಲ್ಲ ಎನಿಸುತ್ತದೆ ಎಂದು ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌