ಗ್ಯಾರಂಟಿ ಸಮಾವೇಶದಲ್ಲಿ 'ಭಾರತ್ ಮಾತಾಕೀ ಜೈ' ಎಂದ ಸಚಿವ ಮಹದೇವಪ್ಪ!

Published : Mar 15, 2024, 04:51 PM ISTUpdated : Mar 18, 2024, 01:56 PM IST
ಗ್ಯಾರಂಟಿ ಸಮಾವೇಶದಲ್ಲಿ 'ಭಾರತ್ ಮಾತಾಕೀ ಜೈ' ಎಂದ ಸಚಿವ ಮಹದೇವಪ್ಪ!

ಸಾರಾಂಶ

ಇದೊಂದು ಐತಿಹಾಸಿಕ ಕಾರ್ಯಕ್ರಮ. ಇದೇ ಮೈದಾನದಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೆವು ಇದೀಗ ಗ್ಯಾರಂಟಿ ಸಮಾವೇಶವನ್ನು ಇದೇ ಮೈದಾನದಲ್ಲಿ ನಡೆಸುತ್ತಿದ್ದೇವೆ ಎಂದು ಸಚಿವ ಮಹದೇವಪ್ಪ ತಿಳಿಸಿದರು.

ಮೈಸೂರು (ಮಾ.15): ಇದೊಂದು ಐತಿಹಾಸಿಕ ಕಾರ್ಯಕ್ರಮ. ಇದೇ ಮೈದಾನದಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೆವು ಇದೀಗ ಗ್ಯಾರಂಟಿ ಸಮಾವೇಶವನ್ನು ಇದೇ ಮೈದಾನದಲ್ಲಿ ನಡೆಸುತ್ತಿದ್ದೇವೆ ಎಂದು ಸಚಿವ ಮಹದೇವಪ್ಪ ತಿಳಿಸಿದರು.

ಇಂದು ಸಿಎಂ ತವರು ಜಿಲ್ಲೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ  ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ 'ಭಾರತ್ ಮಾತಾ ಕೀ ಜೈ' ಎನ್ನುತ್ತಲೇ ಭಾಷಣ ಆರಂಭಿಸಿದ ಸಚಿವ ಮಹದೇವಪ್ಪ, ನಾವು ವಿಧಾನಸಭೆ ಚುನಾವಣೆಗೆ ಮೊದಲೇ ಗ್ಯಾರಂಟಿ ಕಾರ್ಡ್‌ಗಳನ್ನು ಹಂಚಿದ್ದೆವು ನಮ್ಮ ಕಾರ್ಯಕರ್ತರು ಮನೆ ಮನೆಗೆ ಹೋಗಿ ಗ್ಯಾರಂಟಿ ಕಾರ್ಡ್ ಹಂಚಿದ್ದರು. ನೀವೆಲ್ಲರೂ ನಮ್ಮ ಗ್ಯಾರಂಟಿ ಯೋಜನೆ ಮೆಚ್ಚಿ 135 ಸೀಟು ಕೊಟ್ರಿ. ನಾವು ಅಧಿಕಾರಕ್ಕೆ ಬಂದ ಬಳಿಕ ಮಾಡಿದ ಮೊದಲ ಕೆಲಸವೆಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದು, ಅ ಮೂಲಕ ನಾವು ನಿಮಗೆ ಕೊಟ್ಟಿದ್ದ ಮಾತನ್ನು ಉಳಿಸಿಕೊಂಡೆವು. ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದರು.

ಸಮಾವೇಶಕ್ಕೆ ಬಂದವರಿಗೆ ₹200 ಗ್ಯಾರಂಟಿ! ಕಾರ್ಯಕ್ರಮ ಮುಗಿದ ಬಳಿಕ ಹಣಕ್ಕಾಗಿ ಬಿಸಲಲ್ಲಿ ಕಾದು ಸುಸ್ತಾದ ಮಹಿಳೆಯರು!

ನಾವು ಬಡ ಕುಟುಂಬಗಳಿಗೆ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೆವು. ಆದರೆ ಕೇಂದ್ರ ಸರ್ಕಾರ ನಮಗೆ ತೊಂದರೆ ಕೊಡುವ ಉದ್ದೇಶದಿಂದ ಅಕ್ಕಿ ಕೊಡಲಿಲ್ಲ. ಅಷ್ಟಕ್ಕೆ ನಾವು ಧೃತಿಗೆಡಲಿಲ್ಲ ಅಕ್ಕಿ ಬದಲಾಗಿ ಹಣ ನೀಡಲು ಮುಂದಾದೆವು. ಗೃಹಜ್ಯೋತಿ ಯೋಜನೆಯಡಿ ಎಲ್ಲಾ ಮನೆಗಳಿಗೂ 200ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಓಡಾಡಲಿಕ್ಕೆ ಸಿಎಂ ಅವಕಾಶ ಮಾಡಿಕೊಟ್ರು. ನಿರುದ್ಯೋಗ ಯುವಕ ಯುವತಿಯರಿಗೆ ಮಾಸಿಕ ಧನ ಸಹಾಯ ಕೊಡಲು ನಿರ್ಧರಿಸಿದೆವು. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ವರ್ಗದ ಜನರ ಅಭಿವೃದ್ಧಿ ಬಯಸಿದ್ದಾರೆ. ನಮ್ಮ ಸರ್ಕಾರ ಯಾವುದೇ ಒಂದು ಜಾತಿ ಧರ್ಮಕ್ಕೆ ಸೀಮಿತವಲ್ಲ. ನಾವು ಹೇಳಿದ್ದನ್ನು ಮಾಡದ್ದೇವೆ, ಮಾಡಿದ್ದನ್ನು ಹೇಳುತ್ತಿದ್ದೇವೆ ಎಂದರು.

 

ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ: ಗ್ಯಾರಂಟಿ ಸಮಾವೇಶದಲ್ಲಿ ಡಿಕೆ ಶಿವಕುಮಾರ ಭವಿಷ್ಯ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು: ನಗರದಲ್ಲಿ 1000ಕ್ಕೂ ಅಧಿಕ ಅಪಾಯಕಾರಿ ಮರ ಪತ್ತೆ!
ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ