ಯಡಿಯೂರಪ್ಪ ನನಗೆ ನಗಣ್ಯ : ಎಚ್.ಡಿ ರೇವಣ್ಣ

Published : Feb 11, 2019, 11:27 AM ISTUpdated : Feb 11, 2019, 11:44 AM IST
ಯಡಿಯೂರಪ್ಪ ನನಗೆ ನಗಣ್ಯ  : ಎಚ್.ಡಿ ರೇವಣ್ಣ

ಸಾರಾಂಶ

ಈ ವ್ಯಕ್ತಿ ಬಗ್ಗೆ ನಾನು ಮಾತನಾಡಲು ಹೋದರೆ ಪೊಳ್ಳೆದ್ದು ಹೋಗುತ್ತೇನೆ. ಇದರ ವಿಚಾರ ಜನರಿಗೆ ಬಿಟ್ಟು ನಾನು ನೆಗ್ಲೆಕ್ಟ್ ಮಾಡುತ್ತೇನೆ ಎಂದು ಸಚಿವ ಎಚ್.ಡಿ.ರೇವಣ್ಣ  ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಹಾಸನ : ಯಡಿಯೂರಪ್ಪ ಆಪರೇಷನ್ ಕಮಲದ ಆಡಿಯೋ ವಿಚಾರದ ಬಗ್ಗೆ ನಾನು ಮಾತಾಡೋಕೆ ಹೋದ್ರೆ ಪೊಳ್ಳೆದ್ದು ಹೋಗ್ತೀನಿ. ಅವರ ಬಗ್ಗೆ ಜನರಿಗೆ ಬಿಟ್ಟು ನಾನು ನಿರ್ಲಕ್ಷ್ಯ ಮಾಡುತ್ತೇನೆ ಎಂದು ಎಂದು ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ. 

ಹಾಸನದಲ್ಲಿ ಮಾತನಾಡಿದ ರೇವಣ್ಣ, ಮೊದಲು ಧ್ವನಿ ತಮ್ಮದಲ್ಲ ಎಂದವರು ಈಗ ಒಪ್ಪಿಕೊಂಡಿದ್ದಾರೆ. ಯಾರು ಯಾರನ್ನೇ ಕಳುಹಿಸಲಿ ಇವರೇಕೆ ಆಪರೇಷನ್ ಕಮಲ ಮಾಡುವ ಬಗ್ಗೆ ಮಾತನಾಡಬೇಕಿತ್ತು ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಆಪರೇಷನ್ : ನನ್ನನ್ನೇ ಸಿಎಂ ಮಾಡಿ ಎಂದಿದ್ದ ಡಿಕೆಶಿ 

ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಸಮ್ಮಿಶ್ರ ಸರ್ಕಾರ ಹೆಚ್ಚು ಸುಭದ್ರವಾಗಿದ್ದು, ಪತನವಾಗುವ ಸಾಧ್ಯತೆಯೇ ಇಲ್ಲ ಎಂದು ಸರ್ಕಾರದ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ. 

ರಾಜ್ಯದಲ್ಲಿ ಹೆಚ್ಚಿನ ಬರಗಾಲದ ಸ್ಥಿತಿ ಇದ್ದು,  ಇದರ ಬಗ್ಗೆ ಚಿಂತೆ ಮಾಡುವುದು ಬಿಟ್ಟು  ಬಿಜೆಪಿ ನಾಯಕರು ಆಪರೇಷನ್ ಕಮಲ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಗುಡುಗಿದರು.

ಆಡಿಯೋ ನನ್ನದೇ ಎಂದ ಬಿಎಸ್‌ವೈಗೆ ಸಿದ್ದರಾಮಯ್ಯ ಟಾಂಗ್!

ರಾಜ್ಯದಲ್ಲಿ 156 ತಾಲೂಕಿನಲ್ಲಿ ಬರಗಾಲ‌ ಸ್ಥಿತಿ ಇದೆ. ಇದಕ್ಕೆ ನಾವು ಮೂರು ಸಾವಿರ ಕೋಟಿ ನೆರವು ಕೇಳಿದ್ದೆವು.  ಆದರೆ  ನಮಗೆ 900 ಕೋಟಿ ನೀಡಿ, ಪಕ್ಕದ ರಾಜ್ಯ ಮಹಾರಾಷ್ಟ್ರಕ್ಕೆ 4 ಸಾವಿರ ಕೋಟಿ ಕೊಟ್ಟಿದ್ದಾರೆ.  ಬಿಜೆಪಿ ನಾಯಕರು ರಾಜ್ಯದಲ್ಲಿ ಯಾವ ನೈತಿಕತೆಯಿಂದ ಮತ ಕೇಳುತ್ತಾರೆ ಎಂದು ಬಿಜೆಪಿಗರ ವಿರುದ್ಧ ಹರಿಹಾಯ್ದರು. 

ಐದು ವರ್ಷ ರಾಜ್ಯಕ್ಕೆ ನಿಮ್ಮ‌ ಕೊಡುಗೆ ಏನು ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಉದ್ಯೋಗ ಖಾತ್ರಿ ಯೋಜನೆಯದ್ದೇ ಎರಡೂವರೆ ಕೋಟಿ ಬಾಕಿ ಬರಬೇಕಿದೆ. ಅದರ‌ ಬಗ್ಗೆ ಬಿಜೆಪಿ ನಾಯಕರಿಗೆ ಚಿಂತೆಯಿಲ್ಲ. ಅದು ಬಿಟ್ಟು ಆಪರೇಷನ್ ಕಮಲದ್ದೇ ಜಪ ಮಾಡುತ್ತಿದ್ದಾರೆ ಎಂದು ರೇವಣ್ಣ ಕಿಡಿ ಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ