ಫಾರಿನ್ ಟೂರ್ ಪ್ಲಾನ್ ಕೈ ಬಿಟ್ಟ ಸಚಿವ ಶೆಟ್ಟರ್

Published : Nov 01, 2019, 12:24 PM ISTUpdated : Nov 01, 2019, 05:15 PM IST
ಫಾರಿನ್ ಟೂರ್ ಪ್ಲಾನ್ ಕೈ ಬಿಟ್ಟ ಸಚಿವ ಶೆಟ್ಟರ್

ಸಾರಾಂಶ

ಸ್ವಪಕ್ಷಿಯರಿಂದಲೇ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ತಮ್ಮ ವಿದೇಶಿ ಪ್ರವಾಸವನ್ನು ಕೈ ಬಿಟ್ಟಿದ್ದಾರೆ. 

ಹುಬ್ಬಳ್ಳಿ [ನ.01]: ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹೊತ್ತಿನಲ್ಲಿಯೇ ಬೃಹತ್‌ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಕುಟುಂಬ ಸಮೇತರಾಗಿ ವಿದೇಶಕ್ಕೆ ತೆರಳಲು ಮುಂದಾಗಿರುವುದಕ್ಕೆ  ಅಸಮಾಧಾನ ವ್ಯಕ್ತವಾಗಿದ ಬೆನ್ನಲ್ಲೇ ಪ್ರವಾಸ ರದ್ದು ಮಾಡಿದ್ದಾಗಿ ಹೇಳಿದ್ದಾರೆ. 

"

ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್ ನನಗೆ ವಿದೇಶ ಪ್ರವಾಸಕ್ಕೆ ಹೋಗುವ ಚಟ ಇಲ್ಲ. ಚೀನಾ ಕೈಗಾರಿಕಾ ವಿಭಾಗದ ಆಹ್ವಾನದ ಮೇರೆಗೆ ಪ್ರವಾಸ ಫಿಕ್ಸ್ ಆಗಿತ್ತು ಎಂದರು. 

ನಾನು ಮಜಾ ಮಾಡಲು ಹೊರಟಿರಲಿಲ್ಲ. ಪ್ರವಾಸದ ಬಗ್ಗೆ ಟೀಕೆ ವ್ಯಕ್ತವಾಗಿದ್ದು, ಪ್ರವಾಸ ರದ್ದು ಮಾಡುವೆ. ಚೀನಾ ಹಾಗೂ ಕೈಗಾರಿಕೆ ಇಲಾಖೆ ಆಹ್ವಾನವಿತ್ತು. ನಾನಿನ್ನೂ ನಿರ್ಧಾರ ಮಾಡಿರಲಿಲ್ಲ ಎಂದು ಹೇಳಿದರು. 

ಚೀನಾ ದೇಶದ ಎಂಟು ವಿವಿಧ ಕೈಗಾರಿಕೆಯ ಪ್ರತಿನಿಧಿಗಳು ರಾಜ್ಯದ ವಿವಿಧ ವಲಯದಲ್ಲಿ ಬಂಡವಾಳ ಹೂಡಿಕೆ ಮಾಡುವ ಸಂಬಂಧ ಜಗದೀಶ್‌ ಶೆಟ್ಟರ್‌ ಅವರನ್ನು  ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದರು. ಈ ವೇಳೆ ಚೀನಾ ದೇಶದ ಪ್ರತಿನಿಧಿಗಳು ಆಹ್ವಾನಿಸಿದ್ದರು. ಈ ಆಹ್ವಾನದ ಮೇರೆಗೆ ನ.5ರಿಂದ ಚೀನಾಕ್ಕೆ ತೆರಳಲು ನಿರ್ಧರಿಸಿದ್ದರು. ಅಲ್ಲಿಂದ ಬ್ರಿಟನ್‌ಗೂ ತೆರಳುವ ಉದ್ದೇಶವಿತ್ತು.

ಪ್ರವಾಹ ಪರಿಸ್ಥಿತಿ ಇದ್ದರೂ ಶೆಟ್ಟರ್‌ ವಿದೇಶ ಪ್ರವಾಸ: ವಿವಾದ...

ಆದರೆ, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇಂತಹ ಸಮಯದಲ್ಲಿ ಸಚಿವರು ವಿದೇಶ ಪ್ರವಾಸ ಕೈಗೊಳ್ಳುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಹೀಗಾಗಿ, ಅಂತಿಮವಾಗಿ ಶೆಟ್ಟರ್‌ ತಮ್ಮ ಪ್ರವಾಸ  ರದ್ದು ಮಾಡಿದ್ದಾಗಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!