ಕದ್ದುಮುಚ್ಚಿ ಪಟಾಕಿ ಹೊಡೆಯುವವರ ಬಗ್ಗೆ ಸಚಿವ ಸುಧಾಕರ್ ಹೇಳಿದಿಷ್ಟು..!

Published : Nov 06, 2020, 04:57 PM ISTUpdated : Nov 06, 2020, 07:31 PM IST
ಕದ್ದುಮುಚ್ಚಿ ಪಟಾಕಿ ಹೊಡೆಯುವವರ ಬಗ್ಗೆ ಸಚಿವ ಸುಧಾಕರ್ ಹೇಳಿದಿಷ್ಟು..!

ಸಾರಾಂಶ

ಈ ಬಾರಿಯ ದೀಪಾವಳಿ ವೇಳೆ ಪಟಾಕಿ ಸಿಡಿಸುವುದಕ್ಕೆ ರಾಜ್ಯ ಸರ್ಕಾರ ನಿಷೇಧಿಸಿದೆ. ಒಂದು ವೇಳೆ ಕದ್ದುಮುಚ್ಚಿ ಪಟಾಕಿ ಹೊಡೆಯುವವರ ಗ್ಗೆ ಸಚಿವ ಸುಧಾಕರ್ ಪ್ರತಿಕ್ರಿಯಿಸಿದ್ದು ಹೀಗೆ

ಬೆಂಗಳೂರು, (ನ.06): ಕೊರೋನಾ ಸೋಂಕಿನ ಹಿನ್ನಲೆ ಈ ಬಾರಿ ಸರಳವಾಗಿ ದೀಪಾವಳಿ ಆಚರಣೆ ಮಾಡುವಂತೆ ಆರೋಗ್ಯ ಸಚಿವ ಡಾ ಕೆ ಸುಧಾಕರ್​ ತಿಳಿಸಿದ್ದಾರೆ. 

"

ಸುದ್ದಿಗಾರರೊಂದಿಗೆ ಮತನಾಡಿದ ಆರೋಗ್ಯ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಪಟಾಕಿ ನಿಷೇಧ ಬಗ್ಗೆ ಸಿಎಂ ಅವರು ಘೋಷಿಸಿದ್ದಾರೆ. ಈ ಸಲ ಸರಳ ದೀಪಾವಳಿ ಮಾಡಿ ಅಂತ ಸಿಎಂ ಹೇಳಿದ್ದಾರೆ. ಈ ವರ್ಷ ಯಾರೂ ಪಟಾಕಿ ಸಿಡಿಸಬೇಡಿ ಎಂದು ಮನವಿ ಮಾಡಿದರು.

ಸಿಎಂ ಮಹತ್ವದ ಘೋಷಣೆ: ಈ ಬಾರಿ ದೀಪಾವಳಿ ಪಟಾಕಿ ಠುಸ್..!

ಹಬ್ಬಗಳ ಸಾಲಿನ ಜೊತೆ ಚಳಿಗಾಲ ಕೂಡ ಆರಂಭವಾಗಲಿದೆ. ಇದರಿಂದ ಕೋವಿಡ್​ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಬಾರಿ ಪಟಾಕಿ ಹೊಡೆಯುವುದನ್ನು ನಿಷೇಧಿಸಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ಈ ಹಿನ್ನಲೆ ಈ ಬಾರಿ ಯಾರು ಪಟಾಕಿ ಹೊಡೆಯಬಾರದು. ಒಂದು ವೇಳೆ ಕದ್ದುಮುಚ್ಚಿ ಪಟಾಕಿ ಹೊಡೆದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾವ ರೀತಿ ಕ್ರಮ ಕೈಗೊಳ್ಳಲಾಗುವುದು ಎಂಬ ಬಗ್ಗೆ ನಾಳಿನ ಸಭೆಯಲ್ಲಿ ತೀರ್ಮಾನ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ನಿಯಮ ಉಲ್ಲಂಘಿಸಿ ಪಟಾಕಿ ಹೊಡೆದರೆ ದಂಡ ಹಾಕಬೇಕೋ ಇನ್ನೇನೂ ಕ್ರಮ‌ಕೈಗೊಳ್ಳಬೇಕು ಎನ್ನುವ ಬಗ್ಗೆ ನಾಳೆ ರೂಪರೇಷ ಸಿದ್ಧಪಡಿಸಲಾಗುವುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!
CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ