
ಬೆಂಗಳೂರು(ಜೂ.29): ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಅಡುಗೆ ಸಿಬ್ಬಂದಿ ಮೂಲಕ ಕೊರೋನಾ ವೈರಸ್ ಕುಟುಂಬ ಸದಸ್ಯರಿಗೆ ವಕ್ಕರಿಸಿತ್ತು. ಸಿಬ್ಬಂದಿಯಿಂತ ಸುಧಾಕರ್ ತಂದೆ, ಹೆಂಡತಿ ಹಾಗೂ ಮಕ್ಕಳಿಗೂ ಕೊರೋನಾ ವೈರಸ್ ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಸಚಿವ ಸುಧಾಕರ್ ಹೋಮ್ ಕ್ವಾರಂಟೈನ್ಗೆ ಒಳಗಾಗಿದ್ದರು. ಇದೀಗ ಸುಧಾಕರ್ ಕೋವಿಡ್ ಪರೀಕ್ಷಾ ವರದಿ ನೆಗಟಿವ್ ಆಗಿದೆ. ಹೀಗಾಗಿ ನಾಳೆ(ಜೂ.30)ಯಿಂದ ಸುಧಾಕರ್ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
ಕ್ವಾರಂಟೈನ್ನಲ್ಲೂ ಕರ್ತವ್ಯಪ್ರಜ್ಞೆ ಮೆರೆದ ಸಚಿವ ಸುಧಾಕರ್
ಈ ಕುರಿತು ಸುಧಾಕರ್ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ನ್ನ ಕುಟುಂಬದ ಕೆಲವು ಸದಸ್ಯರಿಗೆ ಸೋಂಕು ಧೃಡಪಟ್ಟ ನಂತರ ಕಳೆದ 8 ದಿನಗಳಿಂದ ಗೃಹ ಕ್ವಾರಂಟೈನ್ ಗೆ ಒಳಗಾಗಿದ್ದೇನೆ. ಈಗ ಮತ್ತೊಮ್ಮೆ ಕೋವಿಡ್ ಪರೀಕ್ಷಾ ವರದಿ ನೆಗಟಿವ್ ಬಂದಿರುವುದರಿಂದ ನಾಳೆಯಿಂದ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಸಿಕೊಳ್ಳಲಿದ್ದೇನೆ. ನಿಮ್ಮೆಲ್ಲರ ಹಾರೈಕೆಗಳಿಂದ ನನ್ನ ಕುಟುಂಬ ಸದಸ್ಯರು ಚೇತರಿಸಿಕೊಳ್ಳುತ್ತಿದ್ದಾರೆ. ಎಂದು ಟ್ವೀಟ್ ಮಾಡಿದ್ದಾರೆ.
ಸಚಿವ ಸುಧಾಕರ್ ಅವರ ಬೆಂಗಳೂರಿನ ಸದಾಶಿವನಗರದಲ್ಲಿನ ಅಡುಗೆ ಸಿಬ್ಬಂದಿಗೆ ಕೊರೋನಾ ಕಾಣಿಸಿಕೊಂಡಿತ್ತು. ಹೀಗಾಗಿ ಸುಧಾಕರ್ ಸೇರಿದಂತೆ ಕುಟುಂಬ ಸದಸ್ಯರ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಬಳಿಕ ಸುಧಾಕರ್ ತಂದೆ, ಪತ್ನಿ, ಮಕ್ಕಳಿಗೂ ಕೊರೋನಾ ವೈರಸ್ ದೃಢಪಟ್ಟಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ