ಟಿಪ್ಪು ಬಗ್ಗೆ ವಿಶ್ವನಾಥ್‌ ಹೇಳಿಕೆ ನೀಡಬಾರದಿತ್ತು: ಈಶ್ವರಪ್ಪ

Kannadaprabha News   | Asianet News
Published : Aug 28, 2020, 09:41 AM ISTUpdated : Aug 28, 2020, 09:55 AM IST
ಟಿಪ್ಪು ಬಗ್ಗೆ ವಿಶ್ವನಾಥ್‌ ಹೇಳಿಕೆ ನೀಡಬಾರದಿತ್ತು: ಈಶ್ವರಪ್ಪ

ಸಾರಾಂಶ

ಎಚ್ ವಿಶ್ವನಾಥ್ ಟಿಪ್ಪು ಬಗ್ಗೆ ಮಾತನಾಡಿರುವುದಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಗ ಈ ರೀತಿ ಮಾತನಾಡಬಾರದಿತ್ತು ಎಂದಿದ್ದಾರೆ.

ಬೆಂಗಳೂರು (ಆ.28):  ಟಿಪ್ಪು ವಿಷಯ ಮುಗಿದ ಅಧ್ಯಾಯವಾಗಿರುವಾಗ ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಈಗ ಪುನಃ ಈ ಬಗ್ಗೆ ಹೇಳಿಕೆ ನೀಡುವ ಅವಶ್ಯಕತೆ ಇರಲಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ಯ ಸಚಿವ ಕೆ.ಎಸ್‌.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಶ್ವನಾಥ್‌ ಅವರು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ, ಟಿಪ್ಪು ಬಗ್ಗೆ ಮತ್ತೆ ಮತ್ತೆ ಗೊಂದಲ ಮೂಡಿಸಲಾಗುತ್ತೋ ಗೊತ್ತಿಲ್ಲ. ಅವರು ಯಾಕೆ, ಎಲ್ಲಿ, ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಟಿಪ್ಪು ವಿಷಯ ಈಗ ಮುಗಿದು ಹೋದ ಅಧ್ಯಾಯ, ಟಿಪ್ಪು ಒಳ್ಳೆಯವನೋ, ಕೆಟ್ಟವನೋ ಎಂಬ ಬಗ್ಗೆ ಚರ್ಚೆಯಾಗಿದೆ. ಈಗ ಹೇಳುವ ಅವಶ್ಯಕತೆ ಇರಲಿಲ್ಲ. ಈ ಬಗ್ಗೆ ಈಶ್ವರಪ್ಪ ಜೊತೆ ವೈಯಕ್ತಿಕವಾಗಿ ಭೇಟಿ ಮಾಡಿ ಚರ್ಚೆ ಮಾಡುವುದಾಗಿ ಹೇಳಿದರು.

ಎಲ್ಲರೂ ಬಿಜೆಪಿ ಸೇರ್ಪಡೆಗೊಳ್ಳಿ : ಕಾಂಗ್ರೆಸ್ ಪಕ್ಷ ಅವಸಾನದ ಅಂಚಲ್ಲಿದೆ'

ಕಠಿಣ ಕ್ರಮ:  ಬೆಳಗಾವಿ, ಗದಗ, ವಿಜಯಪುರ ಮುಂತಾದ ಜಿಲ್ಲೆಗಳಲ್ಲಿ ಅನಾಮಧೇಯವಾಗಿ ರೈತರ ಹೆಸರಿಗೆ ಬಿತ್ತನೆ ಬೀಜ ಕಳಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಎಲ್ಲ ಕಡೆ ಈ ರೀತಿಯ ಘಟನೆಗಳು ನಡೆದಿಲ್ಲ. ಯಾರು ಈ ರೀತಿ ಬೀಜ ಕಳಿಸಿ ಕುತಂತ್ರ ಮಾಡುತ್ತಿದ್ದಾರೆ ಎಂಬ ಬಗ್ಗೆ ತನಿಖೆ ಮಾಡಿ, ಅಂತವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಈ ವರ್ತನೆ ಸರಿಯಲ್ಲ, ಹೈಕೋರ್ಟ್ ಪರಿಗಣಿಸುವ ಮೊದಲು ಕ್ಷಮೆ ಮುಖ್ಯ, ಪ್ರಜ್ವಲ್ ರೇವಣ್ಣ ಅರ್ಜಿಗೆ ಸುಪ್ರೀಂ ಕೆಂಡ!
ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!