ತುಮಕೂರು ಬಳಿ ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರು ಅಪಘಾತ

Published : Dec 28, 2023, 09:50 AM IST
ತುಮಕೂರು ಬಳಿ ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರು ಅಪಘಾತ

ಸಾರಾಂಶ

ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸ್ವಲ್ಪದರಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. 

ತುಮಕೂರು(ಡಿ.28): ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ(ಬುಧವಾರ) ರಾತ್ರಿ ನಡೆದಿದೆ. 

ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸ್ವಲ್ಪದರಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. 

ಬೈಕ್ ಡಿಕ್ಕಿಯಾಗಿ ಪಾದಾಚಾರಿ ಸಾವು, ಸ್ಥಳಕ್ಕೆ ಧಾವಿಸಿದ ಕುಟುಂಬಸ್ಥರು ಕಾರು ಅಪಘಾತದಲ್ಲಿ ನಿಧನ!

ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು, ಈ ವೇಳೆ ಲಾರಿ ಚಾಲಕ ಕಾರನ್ನು ಉಜ್ಜಿಕೊಂಡು ಹೋಗಿದ್ದಾನೆ. ಅಪಘಾತದಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತದ ಬಳಿಕ ಸಚಿವ ಮಧು ಬಂಗಾರಪ್ಪ ಬೇರೆ ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌
ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌