ಚೆಕ್‌ ಬೌನ್ಸ್‌ ಕೇಸ್‌: ಸಚಿವ ಮಧು ಬಂಗಾರಪ್ಪ ದೋಷಿ

Published : Dec 30, 2023, 05:18 AM IST
ಚೆಕ್‌ ಬೌನ್ಸ್‌ ಕೇಸ್‌: ಸಚಿವ ಮಧು ಬಂಗಾರಪ್ಪ ದೋಷಿ

ಸಾರಾಂಶ

ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆ ಸಲ್ಲಿಸಿದ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು, 6,96,70,000 ರು. ದಂಡ ಪಾವತಿಸಬೇಕು. ಇಲ್ಲದಿದ್ದರೆ ಅರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು. 6,96,70,000 ಮೊತ್ತದ ಪೈಕಿ 6,96,60,000 ದೂರುದಾರರಿಗೆ ಮತ್ತು ಉಳಿದ 10 ಸಾವಿರ ರು. ಸರ್ಕಾರಕ್ಕೆ ಪಾವತಿಸಬೇಕಾಗಿದೆ ಎಂದು ತಿಳಿಸಿದೆ.

ಬೆಂಗಳೂರು(ಡಿ.30):  ಚೆಕ್ಸ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ 6.96 ಕೋಟಿ ರು. ಪಾವತಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆ ಸಲ್ಲಿಸಿದ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು, 6,96,70,000 ರು. ದಂಡ ಪಾವತಿಸಬೇಕು. ಇಲ್ಲದಿದ್ದರೆ ಅರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು. 6,96,70,000 ಮೊತ್ತದ ಪೈಕಿ 6,96,60,000 ದೂರುದಾರರಿಗೆ ಮತ್ತು ಉಳಿದ 10 ಸಾವಿರ ರು. ಸರ್ಕಾರಕ್ಕೆ ಪಾವತಿಸಬೇಕಾಗಿದೆ ಎಂದು ತಿಳಿಸಿದೆ.

ಉತ್ತಮ ಶಿಕ್ಷಣ ಕೊಡಿಸುವುದು ದೇವರ ಕೆಲಸಕ್ಕೆ ಸಮ: ಸಚಿವ ಮಧು ಬಂಗಾರಪ್ಪ

ಚೆಕ್‌ ಬೌನ್ಸ್‌ ಕೇಸ್‌ ಸಚಿವ ಮಧು ರಾಜೀನಾಮೆ ಪಡೆಯಿರಿ: ಬಿಜೆಪಿ

ಚೆಕ್‌ ಬೌನ್ಸ್‌ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕು ಎಂದು ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ.
ನ್ಯಾಯಾಲಯವು ₹6.96 ಕೋಟಿ ದಂಡ ವಿಧಿಸಿದೆ. ಇಂತಹ ಹಿನ್ನೆಲೆಯಿರುವ ಸಚಿವರು ಶಿಕ್ಷಣ ಇಲಾಖೆಗೆ ಕಪ್ಪುಚುಕ್ಕಿ. ಅವರು ಈ ಇಲಾಖೆಯನ್ನು ನಿಭಾಯಿಸಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಏನಿದು ಪ್ರಕರಣ:

2011ರಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದೆ. ಮಧು ಬಂಗಾರಪ್ಪರವರು ತಮ್ಮ ಆಕಾಶ್ ಆಡಿಯೋ ಸಂಸ್ಥೆಯಿಂದ ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆಗೆ 6.96 ಕೋಟಿ ರು. ಸಂದಾಯ ಮಾಡಬೇಕಿತ್ತು. ಹಲವಾರು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಹಣವನ್ನು ಪಾವತಿಸಲು ಚೆಕ್ ನೀಡಿದ್ದು, ಅದು ಬೌನ್ಸ್ ಆಗಿತ್ತು. ಈಗ ನ್ಯಾಯಾಲಯವು ದಂಡ ಪಾವತಿಸುವಂತೆ ಸೂಚಿಸಿದೆ ಎಂದರು.

ಸದ್ಯಕ್ಕೆ 50 ಲಕ್ಷ ರು. ಪಾವತಿಸಿ ಉಳಿದ ಮೊತ್ತವನ್ನು ಜನವರಿ ಅಂತ್ಯದ ವೇಳೆಗೆ ಕೊಡುವುದಾಗಿ ಮಧು ಬಂಗಾರಪ್ಪ ಅವರು ಮುಚ್ಚಳಿಕೆ ಸಲ್ಲಿಸಿದ್ದರು. ಆದರೆ, ಹಿಂದಿನ ಮುಚ್ಚಳಿಕೆಯನ್ನು ಪಾಲಿಸದ ಕಾರಣ ಅವರ ಕೋರಿಕೆಯನ್ನು ನ್ಯಾಯಾಲಯ ಮನ್ನಿಸಿಲ್ಲ. ಚೆಕ್ ಬೌನ್ಸ್ ಮತ್ತು ಮುಚ್ಚಳಿಕೆ ಬರೆದುಕೊಟ್ಟರೂ ಅದನ್ನು ಪಾಲಿಸದ ಹಿನ್ನೆಲೆ ಇರುವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕು. ಶಿಕ್ಷಣ ಕ್ಷೇತ್ರಕ್ಕೆ ಕಳಂಕವಾಗುವಂತೆ ವರ್ತಿಸಿದ ಮಧು ಬಂಗಾರಪ್ಪ ಅವರು ಆ ಹುದ್ದೆಯಲ್ಲಿ ಮುಂದುವರೆಯುವುದು ಸೂಕ್ತವಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!