ಕರ್ನಾಟಕದ ಇತಿಹಾಸದಲ್ಲೇ ಯಾರಿಗೂ 10 ಲಕ್ಷ ಪರಿಹಾರ ಕೊಟ್ಟಿಲ್ಲ: ಎಚ್‌ಡಿಕೆ ವಿರುದ್ಧ ಸಚಿವ ಮಂಕಾಳು ವೈದ್ಯ ಗರಂ..!

Published : Jul 20, 2024, 06:33 PM ISTUpdated : Jul 20, 2024, 06:37 PM IST
ಕರ್ನಾಟಕದ ಇತಿಹಾಸದಲ್ಲೇ ಯಾರಿಗೂ 10 ಲಕ್ಷ ಪರಿಹಾರ ಕೊಟ್ಟಿಲ್ಲ: ಎಚ್‌ಡಿಕೆ ವಿರುದ್ಧ ಸಚಿವ ಮಂಕಾಳು ವೈದ್ಯ ಗರಂ..!

ಸಾರಾಂಶ

ಐಆರ್‌ಬಿಯವರು ಸರಿಯಾಗಿ ಕೆಲಸ ಮಾಡಿದಿದ್ರೆ ಈ ರೀತಿ ಆಗ್ತಿರ್ಲಿಲ್ಲ. 150 ಕಿ.ಮೀ. ‌‌ಕಾಮಗಾರಿಗೆ 11 ವರ್ಷ ಬೇಕಾ..? 29 ವರ್ಷ ಅವರಿಗೆ ಸರಕಾರ ಲೀಸ್‌ಗೆ ಕೊಟ್ಟಿದೆ ಏನೂ ಮಾಡೋಕಾಗಲ್ಲ. ನಾವು ಐಆರ್‌ಬಿಯವರ ಟೋಲ್‌ಗೇಟ್ ಬಂದ್ ಮಾಡಿಸಿದ್ವಿ. ಶಾಸಕ ಸತೀಶ್ ಸೈಲ್ ಮಾಡಿದ್ರೆ ನಾನು ಮಾಡಿದಂತೆ, ನಾನು ಮಾಡಿದ್ರೆ ಸೈಲ್ ಮಾಡಿದಂತೆ. ಗುಡ್ಡ ಕುಸಿತವಾದ ಬಳಿಕ ಈಗಾಗಲೇ ಐಆರ್‌ಬಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ: ಸಚಿವ ಮಂಕಾಳು ವೈದ್ಯ  

ಕಾರವಾರ(ಜು.20): ಈ ರಾಜ್ಯದ ಇತಿಹಾಸದಲ್ಲಿ ಯಾರಿಗೂ ಪರಿಹಾರವಾಗಿ 10 ಲಕ್ಷ ರೂ. ಕೊಟ್ಟಿಲ್ಲ. ನನಗಿಂತ ಚೆನ್ನಾಗಿ ಮಾಧ್ಯಮದವರಿಗೆ ಗೊತ್ತಿದೆ. ಹಿಂದಿನ ಸರಕಾರದಲ್ಲಿ 5 ಲಕ್ಷ ರೂ. ಕೊಟ್ಟಿದ್ರೂ, ಇನ್ನೂ ಪಾವತಿಯಾಗದೇ ಹಾಗೆಯೇ ಇದೆ. ನಮ್ಮಲ್ಲಿ ಹೊಂದಾಣಿಕೆ ರಾಜಕಾರಣವಿಲ್ಲ. ಆದರೆ, ಬಡವರ ಬಗ್ಗೆ ಹಾಗೂ ಜಿಲ್ಲೆಯ ಬಗ್ಗೆ ನಾನು ಎಲ್ಲರ ಜತೆ ಹೊಂದಾಣಿಕೆ ಮಾಡ್ತಿದ್ದೇನೆ. ರಾಜಕಾರಣದಲ್ಲಿ ಮಾತ್ರ ಯಾವುದೇ ರೀತಿಯ‌ ಹೊಂದಾಣಿಕೆಯಿಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಎಚ್.ಡಿ.‌ ಕುಮಾರಸ್ವಾಮಿ ಹೇಳಿಕೆಗೆ ಸಚಿವ ಮಂಕಾಳು ವೈದ್ಯ ಟಾಂಗ್ ಕೊಟ್ಟಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಅಂತ ಬೇಧಭಾವ ಮಾಡದೇ ಹೊಂದಾಣಿಕೆ ಮಾಡ್ಕೊಂಡು ಹೋಗಬೇಕು. ಅಲ್ಲದೇ, ನಾನು ಸಿಎಂ ಆಗಿದ್ದಾಗ ಭೂ ಕುಸಿತದಲ್ಲಿ ಮನೆ ಕಳೆದುಕೊಂಡವರಿಗೆ 10 ಲಕ್ಷ ರೂ. ನೀಡಿದ್ದೆ ಎಂದು ಕೇಂದ್ರ ಸಚಿವ ಎಚ್.ಡಿ.‌ ಕುಮಾರಸ್ವಾಮಿ ಹೇಳಿದ್ದರು. ಈ ಹೇಳಿಕೆಗೆ ಇಂದು(ಶನಿವಾರ) ನಗರದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಮಂಕಾಳು ವೈದ್ಯ, ಐಆರ್‌ಬಿಯವರು ಸರಿಯಾಗಿ ಕೆಲಸ ಮಾಡಿದಿದ್ರೆ ಈ ರೀತಿ ಆಗ್ತಿರ್ಲಿಲ್ಲ. 150 ಕಿ.ಮೀ. ‌‌ಕಾಮಗಾರಿಗೆ 11 ವರ್ಷ ಬೇಕಾ..? 29 ವರ್ಷ ಅವರಿಗೆ ಸರಕಾರ ಲೀಸ್‌ಗೆ ಕೊಟ್ಟಿದೆ ಏನೂ ಮಾಡೋಕಾಗಲ್ಲ. ನಾವು ಐಆರ್‌ಬಿಯವರ ಟೋಲ್‌ಗೇಟ್ ಬಂದ್ ಮಾಡಿಸಿದ್ವಿ. ಶಾಸಕ ಸತೀಶ್ ಸೈಲ್ ಮಾಡಿದ್ರೆ ನಾನು ಮಾಡಿದಂತೆ, ನಾನು ಮಾಡಿದ್ರೆ ಸೈಲ್ ಮಾಡಿದಂತೆ. ಗುಡ್ಡ ಕುಸಿತವಾದ ಬಳಿಕ ಈಗಾಗಲೇ ಐಆರ್‌ಬಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಯಾವುದೇ ಕಾರಣಕ್ಕೂ ಟೋಲ್ ಕಲೆಕ್ಷನ್ ಮಾಡ್ಬೇಡಿ ಅಂತಾ ಹೇಳಿದ್ದೀವಿ. ಟೋಲ್ ಕೂಡ ಸೆಂಟ್ರಲ್ ಮಿನಿಸ್ಟರ್‌ದ್ದೇ ಎಂದು ಹೇಳಲಾಗ್ತಿದೆ. ಬಿಜೆಪಿಯವರು ಯೋಚನೆ ಮಾಡಬೇಕು, ಮನುಷ್ಯತ್ವ ಆದ್ರೂ ಇಟ್ಟುಕೊಳ್ಳಬೇಕು. ಇವರಿಗೆ ಜನರೇ ಬುದ್ಧಿ ಕಲಿಸ್ತಾರೆ ಅಂತ ನನ್ನ ಅನಿಸಿಕೆ ಅಂತ ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ. 

ಶಿರೂರು ಗುಡ್ಡ ಕುಸಿತ ದುರ್ಘಟನೆ: ತಂದೆಯ ಮೃತದೇಹ ಹುಡುಕಿಕೊಡುವಂತೆ ಹೆಚ್‌ಡಿಕೆಗೆ ಜಗನ್ನಾಥ್ ಪುತ್ರಿಯರ ಮನವಿ..!

ಪರೇಶ್ ಮೇಸ್ತಾ ಒಬ್ಬನಿಗೋಸ್ಕರ ಇಡೀ ಜಿಲ್ಲೆಯನ್ನೇ ಬಂದ್ ಮಾಡಿದ್ರು, ಅವರೆಲ್ಲೋದ್ರು ಈಗ?. ಎಷ್ಟು ಜನ ಸತ್ರು... 7 ಜನ ಅಂತಾ ಲೆಕ್ಕಕ್ಕೆ ಸಿಕ್ಕಿದ್ದು, ಎಷ್ಟು ಜನ ಇದ್ದಾರೆ ಗೊತ್ತಿಲ್ಲ. ನಾವು ಪ್ರಯತ್ನ ನಡೆಸುತ್ತಿದ್ದೇವೆ, ಈ ಸಾವಿಗೆ ಬೆಲೆ‌ ಇಲ್ವಾ?. ಮುಂದಿನ‌‌ ದಿನಗಳಲ್ಲಿ ಜನರು 100% ಬೀದಿಗೆ ಇಳಿದು ಪ್ರತಿಭಟನೆ‌ ಮಾಡ್ತಾರೆ ಎಂದ ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!
ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!