ಸಂಸದ ಅನಂತಕುಮಾರ್ ಹೆಗ್ಡೆನ ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು: ಸಚಿವ ಎಂಬಿ ಪಾಟೀಲ್ ವಾಗ್ದಾಳಿ

Published : Feb 24, 2024, 02:48 PM IST
ಸಂಸದ ಅನಂತಕುಮಾರ್ ಹೆಗ್ಡೆನ ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು: ಸಚಿವ ಎಂಬಿ ಪಾಟೀಲ್ ವಾಗ್ದಾಳಿ

ಸಾರಾಂಶ

ಐದು ವರ್ಷ ನಾಪತ್ತೆಯಾಗಿದ್ರು. ಎಲ್ಲಿಯೂ ಕಾಣಲಿಲ್ಲ. ಮತದಾರರಿಗೂ ಮುಖ ತೋರಿಸಲಿಲ್ಲ. ಈಗ ಚುನಾವಣೆ ಬಂದ ಕಾರಣ ಮತ್ತೆ ಹೊರಗೆ ಬಂದು ಹಿಂದು-ಮುಸ್ಲಿಂ ಅಂತಾ ಹೇಳಿಕೆ ಕೊಡುವ ಮೂಲಕ ಚುನಾವಣೆಗೆ ಸ್ಪರ್ಧೆ ಮಾಡೋಕೆ ಸಿದ್ಧತೆ ನಡೆಸಿದ್ದಾರೆ ಎಂದು ಸಂಸದ ಅನಂತಕುಮಾರ ಹೆಗ್ಡೆ ವಿರುದ್ಧ ಸಚಿವ ಎಂಬಿ ಪಾಟೀಲ್ ವಾಗ್ದಾಳಿ ನಡೆಸಿದರು.

ವಿಜಯಪುರ (ಫೆ.24) ಐದು ವರ್ಷ ನಾಪತ್ತೆಯಾಗಿದ್ರು. ಎಲ್ಲಿಯೂ ಕಾಣಲಿಲ್ಲ. ಮತದಾರರಿಗೂ ಮುಖ ತೋರಿಸಲಿಲ್ಲ. ಈಗ ಚುನಾವಣೆ ಬಂದ ಕಾರಣ ಮತ್ತೆ ಹೊರಗೆ ಬಂದು ಹಿಂದು-ಮುಸ್ಲಿಂ ಅಂತಾ ಹೇಳಿಕೆ ಕೊಡುವ ಮೂಲಕ ಚುನಾವಣೆಗೆ ಸ್ಪರ್ಧೆ ಮಾಡೋಕೆ ಸಿದ್ಧತೆ ನಡೆಸಿದ್ದಾರೆ ಎಂದು ಸಂಸದ ಅನಂತಕುಮಾರ ಹೆಗ್ಡೆ ವಿರುದ್ಧ ಸಚಿವ ಎಂಬಿ ಪಾಟೀಲ್ ವಾಗ್ದಾಳಿ ನಡೆಸಿದರು.

ವಿಜಯಪುರದ ಇಂಡಿ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಸಚಿವರು, ಒಬ್ಬ ಸಂಸದನಾಗಿ ಸಿಎಂ ಸಿದ್ದರಾಮಯ್ಯರ ವಿರುದ್ಧ ಅವಾಚ್ಯ ಪದ ಬಳಸಿದ್ದಾರೆ. ಸಂಸದ ಮಾನಸಿಕ ಸ್ಥೀಮಿತ ಕಳೆದುಕೊಂಡಿದ್ದು, ಯಾವುದಾದರೂ ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು ಎಂದು ತೀವ್ರ ವಾಗ್ದಾಳಿ ನಡೆಸಿದರು.

ಸಿಎಂ ವಿರುದ್ಧ ಸಂಸದ ಅನಂತಕುಮಾರ್ ಅವಾಚ್ಯ ಪದ ಬಳಕೆ: 'ದೀಪ ಆರೋ ಮುಂಚೆ ಹೆಚ್ಚು ಉರಿಯುತ್ತೆ' ಎಂದ ಶಾಸಕ ಲಕ್ಷ್ಮಣ್ ಸವದಿ!

ಹಿಂದೆ ಕೇಂದ್ರ ಸಚಿವರಾಗಿದ್ದ ಇದೇ ಮಹಾಶಯರು ಸಂವಿಧಾನ ತಿರುಚಬೇಕೆಂದು ಹೇಳಿದ್ದರು. ಇಂಥವರ ಬಗ್ಗೆ ಬಹಳ ಮಾತನಾಡೋ ಅವಶ್ಯಕತೆಯಿಲ್ಲ. ಸಿಎಂಗೆ ಅವಾಚ್ಯ ಪದ ಬಳಸಿ ಮಾತನಾಡಿದ್ದು, ಹಿಂದೂ ಮುಸ್ಲಿಂ ಅಂತಾ ಇವರ ಹೇಳಿಕೆಗಳನ್ನು ಯಾರೂ ಗಂಭೀರವಾಗಿ ಪರಿಗಣಿಸಲ್ಲ ಇದು ಚುನಾವಣೆ ಗಿಮಿಕ್  ಅಷ್ಟೇ ಎಂದರು.

'ನೀನು ಬಾರದಿದ್ದರೆ ರಾಮಜನ್ಮಭೂಮಿ ನಿಲ್ಲಲ್ಲ ಮಗನೇ..' ಸಿದ್ಧರಾಮಯ್ಯಗೆ ಏಕವಚನದಲ್ಲಿ ವಾಗ್ದಾಳಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಾಲ್ಮೀಕಿ ಹಗರಣ: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಕೊನೆಗೂ ರಾಜೀನಾಮೆ; ಹೈಕಮಾಂಡ್ ಸೂಚನೆ ಬೆನ್ನಲ್ಲೇ ನಿರ್ಧಾರ!
Mangaluru To Palakkad train: ಮಂಗಳೂರು ಮರಳಿ ಪಾಲಕ್ಕಾಡ್‌ಗೆ ಬೇಡ; ಕೇರಳ ಲಾಭಿ ವಿರುದ್ಧ ಧ್ವನಿ ಎತ್ತಿದ ಕನ್ನಡಪರ ಸಂಘಟನೆಗಳು!