
ಕೊಪ್ಪಳ (ಜ.4): ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಚಿನ್ ಪಾಂಚಾಳಗೂ ಪ್ರಿಯಾಂಕ್ ಖರ್ಗೆ ಯಾವುದೇ ಸಂಬಂಧ ಇಲ್ಲ, ಸಂಪರ್ಕ ಇಲ್ಲ ಎಂದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಹೇಳಿದರು.
ಇಂದು ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಅವರಿಗೆ ಅಧಿಕಾರವಿಲ್ಲದೆ ಅಭದ್ರತೆ ಕಾಡುತ್ತಿದೆ ಹೀಗಾಗಿ ಸರ್ಕಾರದ ವಿರುದ್ಧ ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಕೊರೊನಾದಲ್ಲಿ 40 ಸಾವಿರ ಕೋಟಿ ರೂಪಾಯಿ ಅವ್ಯವಾಹಾರವಾಗಿದೆ, ಯಡಿಯೂರಪ್ಪ ವಿರುದ್ಧ ಪೋಕ್ಸೋ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಹಲವು ಕೇಸ್ಗಳಿವೆ. ಅವುಗಳನ್ನು ಸಿಬಿಐಗೆ ಯಾಕೆ ಕೊಡಲಿಲ್ಲ? ನಮ್ಮ ಸರ್ಕಾರದಲ್ಲಿ 6 ಕೇಸ್ಗಳನ್ನ ಸಿಬಿಐಗೆ ಕೊಟ್ಟಿದ್ದೆವು. ಆದರೆ ಇದುವರೆಗೆ ಒಂದೂ ತನಿಖೆ ಪೂರ್ಣಗೊಂಡಿಲ್ಲ. ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣವನ್ನು ರಾಜ್ಯದ ಪೊಲೀಸರೇ ಪಾರದರ್ಶಕ ತನಿಖೆ ನಡೆಸಲಿದ್ದಾರೆ. ಈಗಾಗಲೇ ತಂಡ ಮಹಜರು ಪ್ರಕ್ರಿಯೆ ನಡೆಸಿದೆ, ಸಿಬಿಐ ಕೊಡುವ ಪ್ರಶ್ನೆ ಇಲ್ಲ ಎಂದರು.
ಇನ್ನು ಕಾಂಗ್ರೆಸ್ನಿಂದ ಆಪರೇಷನ ಹಸ್ತ ನಡೆತಿದೆ ಎಂಬ ಕೇಂದ್ರ ಸಚಿವ ಹೆಚ್ಡಿಕೆ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆಪರೇಷನ್ ಸಂಸ್ಕೃತಿ ತಂದವರೇ ಬಿಜೆಪಿಯವರು, ಈಗ ಜೆಡಿಎಸ್ ಬಿಜೆಪಿ ಒಂದಾಗಿದ್ದಾರೆ. ಅವರು ಒಂದಾಗಿರೋದಕ್ಕೆ ಇದೇ ಆಫರೇಷನ್ ಸಂಸ್ಕೃತಿ ಎಂದು ತಿರುಗೇಟು ನೀಡಿದರು.
ಜೆಡಿಎಸ್ ಸಂಪೂರ್ಣ ನೆಲಕಚ್ಚಿದೆ ಹೀಗಾಗಿ ಅವರು ಬಿಜೆಪಿಯೊಂದಿಗೆ ಸೇರಿಕೊಂಡು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಜೆಡಿಎಸ್ನಲ್ಲೇ ಹಿರಿಯ ನಾಯಕರು, ಶಾಸಕರು ಅಸಮಾಧಾನಗೊಂಡಿದ್ದಾರೆ. ಯಾವಾಗ ಪಕ್ಷ ತೊರೆಯುತ್ತಾರೋ ಗೊತ್ತಿಲ್ಲ. ಅದ್ಯಾಗೂ ನಮಗೆ ಈಗ ಬೇರೆ ಪಕ್ಷದ ಅವಶ್ಯಕತೆ ಇಲ್ಲ ಎಂದರು. ಇದೇ ವೇಳೆ ಸಚಿವ ಸಂಪುಟದ ಪುನರಚನೆಯ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಅದರ ಬಗ್ಗೆ ಸಿಎಂ ಸ್ಪಷ್ಠಪಡಿಸಿದ್ದಾರೆ. ಸಚಿವ ಸಂಪುಟ ಪುನರಚನೆ ಮಾಡುವ ನಿರ್ಧಾರ ಸಿಎಂ ಅವರದ್ದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ