ಜಿಲ್ಲೆಗೊಂದರಂತೆ 31 ಗೋವು ದತ್ತು ಪಡೆದ ಸಚಿವ ಚವ್ಹಾಣ್‌

Published : Jul 29, 2022, 07:00 AM ISTUpdated : Jul 29, 2022, 07:21 AM IST
ಜಿಲ್ಲೆಗೊಂದರಂತೆ 31 ಗೋವು ದತ್ತು ಪಡೆದ ಸಚಿವ ಚವ್ಹಾಣ್‌

ಸಾರಾಂಶ

ರಾಜ್ಯದಾದ್ಯಂತ ಪುಣ್ಯಕೋಟಿ ದತ್ತು ಯೋಜನೆ ಪೋರ್ಟಲಿನಲ್ಲಿ 123 ಗೋಶಾಲೆಗಳು ನೋಂದಣಿ

ಬೆಂಗಳೂರು(ಜು.29):  ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ ಸರ್ಕಾರಿ ಮತ್ತು ಖಾಸಗಿ ಗೋಶಾಲೆಗಳಲ್ಲಿನ ಒಟ್ಟು 31 ಗೋವುಗಳನ್ನು ದತ್ತು ಪಡೆದಿದ್ದೇನೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಪುಣ್ಯಕೋಟಿ ದತ್ತು ಯೋಜನೆಯ ಪೋರ್ಟಲ್‌ಗೆ ಚಾಲನೆ ನೀಡಿದರು. ಈ ಸುದಿನದಂದು 31 ಗೋವುಗಳನ್ನು ದತ್ತು ಪಡೆದು ಅದರ ಪಾಲನೆ, ಪೋಷಣೆ ಮತ್ತು ಆರೈಕೆಗೆ ಸಹಕರಿಸಲು ಮುಂದಾಗಿರುವುದು ನನ್ನ ಪೂರ್ವ ಜನ್ಮದ ಪುಣ್ಯದ ಫಲ ಎಂದು ಹೇಳಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ಗೋಶಾಲೆಗಳಲ್ಲಿ 100 ಗೋವುಗಳನ್ನು ನನ್ನನ್ನು ಒಳಗೊಂಡಂತೆ ಸಾರ್ವಜನಿಕರು ದತ್ತು ಪಡೆದಿದ್ದಾರೆ. ಗೋಶಾಲೆಗಳಿಗೆ 1314 ಜನ ದೇಣಿಗೆ ನೀಡಿದ್ದಾರೆ. ರಾಜ್ಯದಾದ್ಯಂತ ಪುಣ್ಯಕೋಟಿ ದತ್ತು ಯೋಜನೆ ಪೋರ್ಟಲಿನಲ್ಲಿ 123 ಗೋಶಾಲೆಗಳು ನೋಂದಣಿಯಾಗಿದ್ದು, 60 ಗೋಶಾಲೆಗಳ ನೋಂದಣಿ ಪ್ರಗತಿಯಲ್ಲಿದೆ. 16650 ಜಾನುವಾರುಗಳನ್ನು ನೊಂದಾಯಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಿರಿಯ ಪಶು ವೈದ್ಯರ ನೇಮಕ ಶೀಘ್ರ: ಸಚಿವ ಪ್ರಭು ಚವ್ಹಾಣ್‌

ದಿನೇ ದಿನೇ ಗೋಶಾಲೆಗಳಲ್ಲಿ ಜಾನುವಾರುಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಗೋಶಾಲೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಿ ಸಾರ್ವಜನಿಕರ ಸಹಕಾರದಿಂದ ಯಾವುದೇ ಅಡಚಣೆಯಿಲ್ಲದೇ ನಡೆಸುವುದು ಈ ಯೋಜನೆಯ ಉದ್ದೇಶವಾಗಿದೆ. ವಯಸ್ಸಾದ, ರೋಗಗ್ರಸ್ಥ, ನಿರ್ಗತಿಕ, ನಿಶ್ಯಕ್ತ, ರೈತರು ಸಾಕಲಾಗದೆ ತಂದು ಬಿಡುವ ಜಾನುವಾರುಗಳು, ಗಂಡು ಕರುಗಳು, ನ್ಯಾಯಾಲಯ ಹಾಗೂ ಪೊಲೀಸ್‌ ಕಸ್ಟಡಿಯಿಂದ ವಶಪಡಿಸಿಕೊಂಡ ಜಾನುವಾರುಗಳಿಗೆ ಆಶ್ರಯ ನೀಡಿ ಪೋಷಣೆ ಮಾಡಲಾಗುವುದು ಎಂದು ಸಚಿವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!
CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ