ಜನರ ಆರ್ಥಿಕ ಸದೃಢತೆಗೆ ಗ್ಯಾರಂಟಿ ಕಾರಣ: ಪ್ರಿಯಾಂಕ್ ಖರ್ಗೆ

Published : Feb 10, 2024, 09:30 PM IST
ಜನರ ಆರ್ಥಿಕ ಸದೃಢತೆಗೆ ಗ್ಯಾರಂಟಿ ಕಾರಣ: ಪ್ರಿಯಾಂಕ್ ಖರ್ಗೆ

ಸಾರಾಂಶ

ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದು ಇದರ ವಿರುದ್ಧ ‘ನನ್ನ ತೆರಿಗೆ ನನ್ನ ಹಕ್ಕು’ ಘೋಷಣೆಯೊಂದಿಗೆ ಕೇಂದ್ರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ಮಾಡಲಾಯಿತು: ಸಚಿವ ಪ್ರಿಯಾಂಕ್ ಖರ್ಗೆ 

ಕಲಬುರಗಿ(ಫೆ.10): ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಜನರ ಆರ್ಥಿಕ ಸದೃಢತೆಗೆ ಕಾರಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 5,22,171 ಜನ ಫಲಾನುಭವಿ ಮಹಿಳೆಯರು ಲಾಭ ಪಡೆಯುತ್ತಿದ್ದಾರೆ. ಅನ್ನ ಭಾಗ್ಯದಡಿ ಜಿಲ್ಲೆಯಲ್ಲಿ 19,16,144 ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ. ಶಕ್ತಿ ಯೋಜನೆಯಡಿ ಪ್ರತಿನಿತ್ಯ ರಾಜ್ಯಾದ್ಯಂತ 60 ಲಕ್ಷ ಮಹಿಳೆಯರು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 21.05 ಕೋಟಿ ಮಹಿಳೆಯರು ಹಾಗೂ ಕಲಬುರಗಿ ಜಿಲ್ಲೆಯಲ್ಲಿ 4.27 ಕೋಟಿ ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 650 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕಿತ್ತು. ಅದರಲ್ಲಿ ಇನ್ನೂ 240 ಕೋಟಿ ಅನುದಾನ ಬಿಡುಗಡೆ ಮಾಡಬೇಕಿದೆ ಎಂದರು.'

ಶಕ್ತಿ ಯೋಜನೆ: ನಿತ್ಯ 60 ಲಕ್ಷ ಮಹಿಳೆಯರ ಪ್ರಯಾಣ, ಸಚಿವ ರಾಮಲಿಂಗಾ ರೆಡ್ಡಿ

ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದು ಇದರ ವಿರುದ್ಧ ‘ನನ್ನ ತೆರಿಗೆ ನನ್ನ ಹಕ್ಕು’ ಘೋಷಣೆಯೊಂದಿಗೆ ಕೇಂದ್ರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ಮಾಡಲಾಯಿತು. ಕರ್ನಾಟಕ ಪ್ರತಿವರ್ಷ ಕೇಂದ್ರಕ್ಕೆ ತೆರಿಗೆ ರೂಪದಲ್ಲಿ 4.30 ಲಕ್ಷ ಕೋಟಿಯಲ್ಲಿ ಕೊಟ್ಟರೆ ಕೇಂದ್ರ ನಮ್ಮ ರಾಜ್ಯಕ್ಕೆ ಅನುದಾನದ ರೂಪದಲ್ಲಿ ಕೇವಲ 44,000 ಕೋಟಿ ಮಾತ್ರ ಕೊಡುತ್ತಿದೆ. ಈ ತಾರತಮ್ಯದ ವಿರುದ್ಧ ಹೋರಾಟ ಮಾಡಿದರೆ ನಮ್ಮನ್ನೇ ದೇಶ ಒಡೆಯುವವರು ಹಾಗೂ ದೇಶದ್ರೋಹಿಗಳು ಎಂದು ನಮ್ಮನ್ನು ಕರೆಯುತ್ತಿದ್ದಾರೆ ಎಂದು ಟೀಕಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ