ಕಸ್ತೂರಿ ರಂಗನ್ ವರದಿ: ಮಹತ್ವದ ತೀರ್ಮಾನ ಕೈಗೊಂಡ ಸರ್ಕಾರ

Published : Dec 28, 2020, 08:27 PM IST
ಕಸ್ತೂರಿ ರಂಗನ್ ವರದಿ: ಮಹತ್ವದ ತೀರ್ಮಾನ ಕೈಗೊಂಡ ಸರ್ಕಾರ

ಸಾರಾಂಶ

 ಪಶ್ಚಿಮ ಘಟ್ಟಗಳನ್ನು ಸಂರಕ್ಷಿತಾರಣ್ಯವಾಗಿಸುವ ಕುರಿತಂತೆ ಕಸ್ತೂರಿ ರಂಗನ್ ವರದಿ ಜಾರಿಯ ವಿರೋಧಿಸುವಂತ ಮಹತ್ವದ ತೀರ್ಮಾನಕ್ಕೆ ಬರಲಾಗಿದೆ. 

ಬೆಂಗಳೂರು, (ಡಿ.28):ಕಸ್ತೂರಿ ರಂಗನ್ ವರದಿ ವಿರೋಧಿಸಲು ಸರ್ಕಾರದಿಂದ ತಿರ್ಮಾನ ಮಾಡಲಾಗಿದೆ. ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕಸ್ತೂರಿ ರಂಗನ್ ವರದಿ ವಿರೋಧಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಸಂಪುಟ ಉಪಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ವರದಿ ವಿರೋಧಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುತ್ತದೆ. ಪತ್ರ ಬರೆಯಲು ಸಂಪುಟ ಉಪಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದರು.

ನಾಯಕರಿಗೆ ಬಿಸಿ.. ಕಸ್ತೂರಿ ರಂಗನ್ ವರದಿ ವಿರೋಧಿಸಿ ಚುನಾವಣೆ ಬಹಿಷ್ಕಾರ!

6 ರಾಜ್ಯಗಳ ವ್ಯಾಪ್ತಿಯಲ್ಲಿ ಈ ಸಮಸ್ಯೆ ಎದುರಾಗಿದೆ. ಹೀಗಾಗಿ ಈ ವರದಿ ಸಾರಾಸಗಟಾಗಿ ತಿರಸ್ಕರಿಸಲು ತಿರ್ಮಾನಿಸಲಾಗಿದೆ. ಜನರು ಈಗ ಹೋರಾಟದ ಹಾದಿ ಹಿಡಿದಿದ್ದಾರೆ ಎಂದರು.

ಡಿಸೆಂಬರ್.31ರಂದು ಎನ್ ಜಿ ಟಿ ಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತಂತೆ ವಿಚಾರಣೆ ಇದೆ. ಅಂದು ರಾಜ್ಯ ಸರ್ಕಾರದಿಂದ ಕಸ್ತೂರಿ ರಂಗನ್ ವರದಿ ಜಾರಿ ಸಾಧ್ಯವಿಲ್ಲ ಎಂಬುದಾಗಿ ತಿಳಿಸಲಾಗುತ್ತದೆ. ಕೇಂದ್ರಕ್ಕೆ ರಾಜ್ಯದ ಜನರ ಭಾವನೆ ತಿಳಿಸುತ್ತೇವೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ