ಸರ್ಕಾರದ ಬಳಿ 1000 ಅನಾಥ ಶವಗಳ ಅಸ್ಥಿ: ಸಚಿವ ಅಶೋಕ್

Published : May 21, 2021, 02:50 PM IST
ಸರ್ಕಾರದ ಬಳಿ 1000 ಅನಾಥ ಶವಗಳ ಅಸ್ಥಿ: ಸಚಿವ ಅಶೋಕ್

ಸಾರಾಂಶ

* 1ಸಾವಿರ ಅನಾಥ ಶವಗಳ ಅಸ್ಥಿ ಇದೆ. * ಅಸಹಾಯಕ ಜನರ ಅಸ್ಥಿ ಸರ್ಕಾರದ ಬಳಿ ಇದೆ... * ಯಾವುದೋ ಕಷ್ಟದಿಂದ ಅಸ್ಥಿ ಪಡೆದಿಲ್ಲ... * ಕಂದಾಯ ಸಚಿವ ಆರ್.ಅಶೋಕ್‌ ಹೇಳಿಕೆ..

ಬೆಂಗಳೂರು, (ಮೇ.21): ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟ ಸುಮಾರು 1 ಸಾವಿರ ಅನಾಥ ಶವಗಳ ಅಸ್ಥಿ ಸರಕಾರದ ಬಳಿ ಇದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಹಾಯಕ ಜನರ ಅಸ್ಥಿ ಸರ್ಕಾರದ ಬಳಿ ಇದೆ. ಅನಿವಾರ್ಯ ಅಥವಾ ಕಷ್ಟದಿಂದಲೋ ಕುಟುಂಬದವರು ಸಂಗ್ರಹಿಸದ ಅಸ್ಥಿ ಸರಕಾರದ ಬಳಿ ಇದೆ ಎಂದು ಸ್ಪಷ್ಟಪಡಿಸಿದರು.

ಅನಾಥ ಮಕ್ಕಳ ಪಾಲಿಗೆ ತಾಯಿಯಾದ ಶಶಿಕಲಾ ಜೊಲ್ಲೆ

ಮೃತರ ಸಂಬಂಧಿಕರು ಮೊಬೈಲ್ ಸ್ವಿಚ್ ಆಫ್ ಇದೆ. ನಾವು ಅಸ್ಥಿ ತೆಗೆದುಕೊಳ್ಳಲು ಮನವಿ ಮಾಡುತ್ತಿದ್ದೇವೆ. ಆದರೆ ಅವರವರ ಕಷ್ಟದಿಂದ ಅಸ್ಥಿ ಪಡೆಯುತ್ತಿಲ್ಲ. ಅಂತಹ ಅಸ್ಥಿಗಳನ್ನು ಸರ್ಕಾರವೇ ಸಂಸ್ಕಾರ ಮಾಡಲು ತೀರ್ಮಾನಿಸಿದೆ ಎಂದು ಅಶೋಕ್ ಹೇಳಿದರು.

ಬಡವ ಬಲ್ಲಿದ ಎಂದು ಭೇದ ಭಾವ ಮಾಡದೇ ಅಸ್ಥಿಗಳನ್ನು ಪಂಚಭೂತಗಳಲ್ಲಿ ಲೀನವಾಗುವಂತೆ ವ್ಯವಸ್ಥೆ. ನೀರಿನಲ್ಲಿ ಸಂಪ್ರದಾಯಬದ್ಧವಾಗಿ ಕಂದಾಯ ಇಲಾಖೆ ವತಿಯಿಂದ ಗೌರವಯುತವಾಗಿ ಸಂಸ್ಕಾರ ಮಾಡಲಿದ್ದೇವೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ