ಕೊರೋನಾ ಲಕ್ಷಣ ಇಲ್ಲದಿದ್ದರೂ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುತ್ತಿವೆ: ಸಚಿವ ಅಶೋಕ್‌

Kannadaprabha News   | Asianet News
Published : Jul 18, 2020, 07:33 AM IST
ಕೊರೋನಾ ಲಕ್ಷಣ ಇಲ್ಲದಿದ್ದರೂ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುತ್ತಿವೆ: ಸಚಿವ ಅಶೋಕ್‌

ಸಾರಾಂಶ

ಕೋವಿಡ್‌ ಸೋಂಕಿಲ್ಲದವರನ್ನು ಇಟ್ಟುಕೊಂಡು ಹಾಸಿಗೆ ಇಲ್ಲ ಎನ್ನುತ್ತಿವೆ: ಅಶೋಕ್‌| ಖಾಸಗಿ ಆಸ್ಪತ್ರೆಗಳ ಈ ಕ್ರಮದಿಂದ ನಿಜವಾಗಿಯೂ ಚಿಕಿತ್ಸೆ ಅಗತ್ಯವಿರುವವರಿಗೆ ಬೆಡ್‌ಗಳು ಲಭ್ಯವಾಗುತ್ತಿಲ್ಲ| ಹೀಗಾಗಿ ಕೂಡಲೇ ರೋಗ ಲಕ್ಷಣಗಳು ಇಲ್ಲದವರನ್ನು ಬಿಡುಗಡೆ ಮಾಡಬೇಕು| ಅಂತಹ ರೋಗಿಗಳನ್ನು ಕೊರೋನಾ ಆರೈಕೆ ಕೇಂದ್ರಗಳು ಅಥವಾ ಹೋಂ ಐಸೊಲೇಷನ್‌ಗೆ ಕಳುಹಿಸಿಕೊಡಲಾಗುವುದು|

ಬೆಂಗಳೂರು(ಜು. 18): ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಪ್ಯಾಕೇಜ್‌ ಶುಲ್ಕ ನಿಗದಿ ಮಾಡಿ ಸೋಂಕಿನ ಲಕ್ಷಣಗಳಿಲ್ಲದವರಿಗೂ ಅನಗತ್ಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿವೆ. ಅಂತಹ ಸೋಂಕು ಲಕ್ಷಣಗಳಿಲ್ಲದ ಸೋಂಕಿತರನ್ನು ಕೂಡಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗುವುದು’ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗಿನ ಸಭೆ ಬಳಿಕ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಯವರು ಸೋಂಕು ಲಕ್ಷಣಗಳಿಲ್ಲದವರನ್ನು ಆಸ್ಪತ್ರೆಯಲ್ಲಿ ಇಟ್ಟುಕೊಂಡು, ಹಾಸಿಗೆಗಳು ಲಭ್ಯವಿಲ್ಲ ಎಂದು ಸಬೂಬು ಹೇಳುತ್ತಿವೆ. ಹಲವು ಖಾಸಗಿ ಆಸ್ಪತ್ರೆಗಳು ಲಕ್ಷಣ ಇಲ್ಲದಿದ್ದರೂ ಚಿಕಿತ್ಸೆ ನೀಡುತ್ತಿದ್ದಾರೆ. ಜತೆಗೆ ಅವರಿಂದ ಪ್ಯಾಕೇಜ್‌ ರೀತಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಖಾಸಗಿ ಆಸ್ಪತ್ರೆಗಳ ಈ ಕ್ರಮದಿಂದ ನಿಜವಾಗಿಯೂ ಚಿಕಿತ್ಸೆ ಅಗತ್ಯವಿರುವವರಿಗೆ ಬೆಡ್‌ಗಳು ಲಭ್ಯವಾಗುತ್ತಿಲ್ಲ. ಹೀಗಾಗಿ ಕೂಡಲೇ ರೋಗ ಲಕ್ಷಣಗಳು ಇಲ್ಲದವರನ್ನು ಬಿಡುಗಡೆ ಮಾಡಬೇಕು’ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಆದೇಶ ಹೊರಡಿಸಿದ್ದಾರೆ. ಬಳಿಕ ಅಂತಹ ರೋಗಿಗಳನ್ನು ಕೊರೋನಾ ಆರೈಕೆ ಕೇಂದ್ರಗಳು ಅಥವಾ ಹೋಂ ಐಸೊಲೇಷನ್‌ಗೆ ಕಳುಹಿಸಿಕೊಡಲಾಗುವುದು ಎಂದು ಹೇಳಿದರು.

ಕೊರೋನಾ ಆರ್ಭಟ: 100 ಟಿಟಿ ವಾಹನಗಳು ಆ್ಯಂಬುಲೆನ್ಸಾಗಿ ಪರಿವರ್ತನೆ

ಇಂದು ಸಂಜೆ ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ

ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಅಗತ್ಯವಿರುವ ಹಾಸಿಗೆಗಳನ್ನು ನೀಡುತ್ತಿಲ್ಲ. ಹೀಗಾಗಿ ಶನಿವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವ ಆರ್‌.ಅಶೋಕ್‌ ತಿಳಿಸಿದರು.

ಸರ್ಕಾರಿ ಆಸ್ಪತ್ರೆಗಳು 5 ಸಾವಿರ ಹಾಸಿಗೆಗಳನ್ನು ನೀಡಬೇಕಿತ್ತು. ಆದರೆ ಈವರೆಗೂ ಅಷ್ಟುಹಾಸಿಗೆಗಳನ್ನು ನೀಡಿಲ್ಲ. ಇದರಿಂದ ಬಹುತೇಕರಿಗೆ ಆರೋಗ್ಯ ಸೇವೆ ದೊರೆಯದಂತಾಗಿದೆ. ಹೀಗಾಗಿ ಪರಸ್ಪರ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ