'ನಿಸ್ಸಾರ್‌ರಿಗೆ ಬಿಜೆಪಿ ಕುಂಕುಮ ಹಚ್ಚಲು ಹೇಳಿತ್ತಾ?..' ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿವಾದ, ಸಚಿವ ರಾಮಲಿಂಗಾರೆಡ್ಡಿ ಕಿಡಿ

Kannadaprabha News, Ravi Janekal |   | Kannada Prabha
Published : Aug 31, 2025, 08:56 AM IST
Minister Ramalinga reddy on dharmasthala case

ಸಾರಾಂಶ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದಕ್ಕೆ ಬಿಜೆಪಿ ಅನಗತ್ಯ ಅಪಪ್ರಚಾರ ಮಾಡುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿಂದೂಗಳಿಗೆ ಸೇರಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಬಿಜೆಪಿಯವರಿಗೆ ಚೇಷ್ಟೆ ಮಾಡದಿದ್ದರೆ ನಿದ್ದೆ ಬರಲ್ಲ ಎಂದು ಕಿಡಿ

 ಚಿತ್ರದುರ್ಗ (ಆ.31): ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ವಿಚಾರದಲ್ಲಿ ಬಿಜೆಪಿ ಅನಗತ್ಯ ಅಪಪ್ರಚಾರ ಮಾಡುತ್ತಿದೆ ಎಂದು ಸಚಿವ‌ ರಾಮಲಿಂಗಾರೆಡ್ಡಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ದೇಗುಲ ಮುಜರಾಯಿ ಇಲಾಖೆಗೆ ಸೇರಿದ್ದು, ಅದು ಹಿಂದೂಗಳಿಗೆ ಸೇರಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಬಿಜೆಪಿಯವರಿಗೆ ಚೇಷ್ಟೆ ಮಾಡದಿದ್ದರೆ ನಿದ್ದೆ ಬರಲ್ಲ. ಚಾಮುಂಡೇಶ್ವರಿ ಪ್ರಾಧಿಕಾರ ಅಧಿಕೃತ ಹೌದೋ, ಅಲ್ಲವೋ ಎಂಬುದನ್ನು ಕೋರ್ಟ್ ತೀರ್ಮಾನಿಸುತ್ತದೆ. ನಾಡಹಬ್ಬ ಏಳು ಕೋಟಿ ಜನರಿಗೆ ಸೇರಿರುವಂತಹ ಹಬ್ಬವಾಗಿದೆ. 

ಇದನ್ನೂ ಓದಿ: ರಾಜಕಾರಣಿಗಳು ಏನು ಬೇಕಾದರೂ ಹೇಳಲಿ, ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು: ಪ್ರಮೋದಾದೇವಿ

ಬಿಎಸ್‌ವೈ ಕಾಲದಲ್ಲಿ ಅಬ್ದುಲ್ ಕಲಾಂರಿಗೆ ಅಹ್ವಾನಿಸಲಾಗಿತ್ತು. ಈ ಹಿಂದೆ ಕವಿ ನಿಸಾರ್ ಅಹ್ಮದ್ ದಸರಾ ಉದ್ಘಾಟಿಸಿದ್ದರು. ಆಗ ಬಿಜೆಪಿಗರು ಅವರಿಗೆ ಕುಂಕುಮ ಹಚ್ಚಿಕೊಂಡು ಬನ್ನಿ ಎಂದಿದ್ದರಾ? ಅವರವರ ಧರ್ಮ ಅವರವರಿಗೆ ಶ್ರೇಷ್ಠ. ಯಾವುದೇ ಧರ್ಮವನ್ನು ಯಾರೂ ದ್ವೇಷಿಸಬಾರದು. ಮತಕ್ಕಾಗಿ ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ. ಬಿಜೆಪಿಗರಿಗೆ ಜನ ನೆಮ್ಮದಿಯಿಂದ ಇರುವುದು ಬೇಕಾಗಿಲ್ಲ. ಅವರದು ಬರೀ ಬೆಂಕಿ ಹಚ್ಚಿ ಬೇಳೆ ಕಾಳು ಬೇಯಿಸಿಕೊಳ್ಳುವ ಕೆಲಸವಾಗಿದೆ ಎಂದು ಕಿಡಿಕಾರಿದರು.

ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಸಿಎಂ, ಡಿಸಿಎಂ ಈಗಾಗಲೇ ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ಮಾಡಿಸಲು ನಿರ್ಧರಿಸಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು: ನಗರದಲ್ಲಿ 1000ಕ್ಕೂ ಅಧಿಕ ಅಪಾಯಕಾರಿ ಮರ ಪತ್ತೆ!
ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ