ಕೃಷ್ಣಾ ಐತೀರ್ಪು ಗೆಜೆಟ್‌ ಆದೇಶಕ್ಕೆ ಕೇಂದ್ರದ ಮೇಲೆ ಒತ್ತಡ: ಸಚಿವ ರಮೇಶ್‌ ಜಾರಕಿಹೊಳಿ

Kannadaprabha News   | Asianet News
Published : Jul 09, 2020, 01:30 PM ISTUpdated : Jul 09, 2020, 01:44 PM IST
ಕೃಷ್ಣಾ ಐತೀರ್ಪು ಗೆಜೆಟ್‌ ಆದೇಶಕ್ಕೆ ಕೇಂದ್ರದ ಮೇಲೆ ಒತ್ತಡ: ಸಚಿವ ರಮೇಶ್‌ ಜಾರಕಿಹೊಳಿ

ಸಾರಾಂಶ

ಕೃಷ್ಣಾ ನೆರೆಹಾವಳಿ ನಿಯಂತ್ರಣಕ್ಕೆ ಜಂಟಿ ಸಮನ್ವಯ ಸಮಿತಿ| ಜಲಸಂಪನ್ಮೂಲ ಇಲಾಖೆ ಸಚಿವ ಜಾರಕಿಹೊಳಿ, ಮಹಾರಾಷ್ಟ್ರ ಸಚಿವರ ಭೇಟಿ ವೇಳೆ ಒಮ್ಮತ| ಮಳೆಗಾಲದಲ್ಲಿ ಉಂಟಾಗುತ್ತಿರುವ ನೆರೆಹಾವಳಿ ನಿಯಂತ್ರಿಸಲು ಸಮನ್ವಯ ಸಮಿತಿ ರಚಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸಭೆಯಲ್ಲಿ ಪ್ರಸ್ತಾಪ|

ಬೆಂಗಳೂರು(ಜು.09): ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣಕ್ಕೆ ಸಮನ್ವಯ ಸಮಿತಿ ರಚನೆ ಹಾಗೂ ಬೇಸಿಗೆಯಲ್ಲಿ ಕುಡಿಯುವ ನೀರು ವಿನಿಮಯಕ್ಕೆ ಸಂಬಂಧಿಸಿದಂತೆ ರಾಜ್ಯ ಜಲಸಂಪನ್ಮೂಲ ಇಲಾಖೆ ಸಚಿವ ರಮೇಶ್‌ ಜಾರಕಿಹೊಳಿ ನೇತೃತ್ವದ ನಿಯೋಗ ಮಹಾರಾಷ್ಟ್ರ ಸಚಿವ ಜಯಂತ್‌ ಪಾಟೀಲ್‌ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದೆ.

ಬುಧವಾರ ಮುಂಬೈಗೆ ತೆರಳಿದ್ದ ನಿಯೋಗವು ಅಲಮಟ್ಟಿ ಜಲಾಶಯದ ಎತ್ತರ ಹಾಗೂ ಕೃಷ್ಣಾ ನದಿ ನೀರು ಬಳಕೆಗೆ ಸಂಬಂಧಿಸಿದಂತೆ ನ್ಯಾಯಾಧಿಕರಣದ ತೀರ್ಪನ್ನು ಕೇಂದ್ರ ಸರ್ಕಾರ ಇದುವರೆಗೆ ಗೆಜೆಟ್‌ನಲ್ಲಿ ಪ್ರಕಟಿಸಿಲ್ಲ. ಈ ಹಿನ್ನೆಲೆಯಲ್ಲಿ ಸದ್ಯ ನೀರು ಬಳಕೆಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ನ್ಯಾಯಾಧಿಕರಣದ ತೀರ್ಪನ್ನು ಗೆಜೆಟ್‌ನಲ್ಲಿ ಪ್ರಕಟಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಉಭಯ ರಾಜ್ಯಗಳು ಸಭೆಯಲ್ಲಿ ತೀರ್ಮಾನಿಸಿವೆ. ಪ್ರತಿವರ್ಷ ಮಳೆಗಾಲದಲ್ಲಿ ಉಂಟಾಗುತ್ತಿರುವ ನೆರೆಹಾವಳಿ ನಿಯಂತ್ರಿಸಲು ಸಮನ್ವಯ ಸಮಿತಿ ರಚಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸಭೆಯಲ್ಲಿ ಪ್ರಸ್ತಾಪಿಸಿದೆ. ಇದಕ್ಕೆ ಒಪ್ಪಿಗೆ ಸೂಚಿಸಿರುವ ರಾಜ್ಯದ ನಿಯೋಗ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್‌ ಹಾಗೂ ಅಧೀಕ್ಷಕ ಎಂಜಿನಿಯರ್‌ ಅವರನ್ನು ಸಮನ್ವಯ ಸಮಿತಿಯ ಸದಸ್ಯರನ್ನಾಗಿ ನೇಮಿಸುವುದಾಗಿ ತಿಳಿಸಿದೆ.

ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ: ಶೀಘ್ರ ಅಧಿಸೂಚನೆ

ನೀರು ವಿನಿಮಯಕ್ಕೆ ಮಹಾರಾಷ್ಟ್ರ ಮನವಿ:

ಇನ್ನು ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮಹಾರಾಷ್ಟ್ರದಿಂದ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹಣದ ಬದಲು ಪರಸ್ಪರ ನೀರು ವಿನಿಮಯ ಮಾಡಿಕೊಳ್ಳುವ ಅಗತ್ಯವಿದೆ ಎಂದು ಮಹಾರಾಷ್ಟ್ರ ಸರ್ಕಾರ ಪ್ರತಿಪಾದಿಸಿದೆ.

ಬೇಸಿಗೆ ಕಾಲದಲ್ಲಿ ಕರ್ನಾಟಕದಲ್ಲಿ ಕುಡಿಯುವ ನೀರಿನ ತೀವ್ರ ಕೊರತೆ ಎದುರಾಗುತ್ತಿರುವುದರಿಂದ ನೀರು ವಿನಿಮಯದ ಬದಲಾಗಿ ಪರ್ಯಾಯ ಮಾರ್ಗಗಳ ಬಗ್ಗೆಯೂ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯದ ನಿಯೋಗ ಇದೇ ವೇಳೆ ಅಧಿಕಾರಿಗಳಿಗೆ ತಿಳಿಸಿದೆ ಎಂದು ತಿಳಿದು ಬಂದಿದೆ. ನಿಯೋಗದಲ್ಲಿ ಜವಳಿ ಸಚಿವ ಶ್ರೀಮಂತ ಪಾಟೀಲ್‌, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್‌ ಕುಮಟಳ್ಳಿ, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಇನ್ನಿತರರಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!