9.5 ಲಕ್ಷ ರೈತರಿಗೆ ಬೆಳೆ ಸಾಲ ವಿತರಣೆ: ಸಚಿವ ಎಸ್‌.ಟಿ.ಸೋಮಶೇಖರ್‌

Kannadaprabha News   | Asianet News
Published : Aug 06, 2020, 10:30 AM IST
9.5 ಲಕ್ಷ ರೈತರಿಗೆ ಬೆಳೆ ಸಾಲ ವಿತರಣೆ: ಸಚಿವ ಎಸ್‌.ಟಿ.ಸೋಮಶೇಖರ್‌

ಸಾರಾಂಶ

ಕಳೆದ ಸಾಲಿನಲ್ಲಿ 22.58 ಲಕ್ಷ ರೈತರಿಗೆ 13577 ಕೋಟಿ ರು. ಬೆಳೆ ಸಾಲ ವಿತರಣೆ| ಈ ಬಾರಿ 9,46,796 ರೈತರಿಗೆ ಕೇವಲ ನಾಲ್ಕು ತಿಂಗಳಲ್ಲಿ 6345.31 ಕೋಟಿ ರು. ಬೆಳೆ ಸಾಲ ವಿತರಣೆ| ಕೋವಿಡ್‌-19 ಸಂಕಷ್ಟದ ಕಾಲದಲ್ಲಿ ಕೊರೋನಾ ವಾರಿಯರ್ಸ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರಿಗೆ ಸಹಕಾರ ಇಲಾಖೆಯಿಂದ ತಲಾ ಮೂರು ಸಾವಿರ ರು.ಪೋತ್ಸಾಹ ಧನ|

ಬೆಂಗಳೂರು(ಆ.06): 2020-21ನೇ ಸಾಲಿನಲ್ಲಿ 24.50 ಲಕ್ಷ ರೈತರಿಗೆ 14,500 ಕೋಟಿ ರು.ಗಳವರೆಗೆ ಬೆಳೆ ಸಾಲ ನೀಡುವ ಗುರಿ ಹೊಂದಲಾಗಿದೆ. ಏಪ್ರಿಲ್‌ 1ರಿಂದ ಈವರೆಗೆ 9,46,796 ರೈತರಿಗೆ 6345.31 ಕೋಟಿ ರು. ಬೆಳೆ ಸಾಲ ವಿತರಣೆ ಮಾಡಲಾಗಿದೆ ಎಂದು ಸಹಕಾರ ಇಲಾಖೆ ತಿಳಿಸಿದೆ.

ಕಳೆದ ಸಾಲಿನಲ್ಲಿ 22.58 ಲಕ್ಷ ರೈತರಿಗೆ 13577 ಕೋಟಿ ರು. ಬೆಳೆ ಸಾಲ ವಿತರಣೆ ಮಾಡಲಾಗಿತ್ತು. ಈ ಬಾರಿ 9,46,796 ರೈತರಿಗೆ ಕೇವಲ ನಾಲ್ಕು ತಿಂಗಳಲ್ಲಿ 6345.31 ಕೋಟಿ ರು. ಬೆಳೆ ಸಾಲ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರ ಕಾರ್ಯಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ರೈತರಿಗೆ 13 ಸಾವಿರ ಕೋಟಿ ಬೆಳೆ ಸಾಲ: ಸಚಿವ ಎಸ್‌.ಟಿ.​ಸೋ​ಮ​ಶೇ​ಖರ್

ಪ್ರೋತ್ಸಾಹ ಧನ ವಿತರಣೆ: 

ಕೋವಿಡ್‌-19 ಸಂಕಷ್ಟದ ಕಾಲದಲ್ಲಿ ಕೊರೋನಾ ವಾರಿಯರ್ಸ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರಿಗೆ ಸಹಕಾರ ಇಲಾಖೆ ತಲಾ ಮೂರು ಸಾವಿರ ರು.ಪೋ›ತ್ಸಾಹ ಧನ ನೀಡುತ್ತಿದೆ. ರಾಜ್ಯದಲ್ಲಿ ಅಂದಾಜು 42608 ಮಂದಿ ಆಶಾ ಕಾರ್ಯಕರ್ತೆಯರಿದ್ದು, ಅವರಲ್ಲಿ 35121 ಮಂದಿಗೆ ತಲಾ ಮೂರು ಸಾವಿರ ರು. ಪೋತ್ಸಾಹ ಧನ ವಿತರಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ