ವಯನಾಡು ಭೂಕುಸಿತ ದುರಂತ: ಕನ್ನಡಿಗರ ರಕ್ಷಣೆಗಾಗಿ ಕೇರಳಕ್ಕೆ ಸಚಿವ ಸಂತೋಷ್‌ ಲಾಡ್‌

Published : Aug 01, 2024, 09:08 AM ISTUpdated : Aug 01, 2024, 01:24 PM IST
ವಯನಾಡು ಭೂಕುಸಿತ ದುರಂತ: ಕನ್ನಡಿಗರ ರಕ್ಷಣೆಗಾಗಿ ಕೇರಳಕ್ಕೆ ಸಚಿವ ಸಂತೋಷ್‌ ಲಾಡ್‌

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಗುಡ್ಡ ಕುಸಿತ ದುರಂತ ನಡೆದ ಕೇರಳದ ವಯನಾಡಿಗೆ ತೆರಳಿದ ಸಚಿವ ಲಾಡ್ ಹಲವು ಸಂತ್ರಸ್ತ ಪ್ರದೇಶಗಳಿಗೆ ಭೇಟಿ ನೀಡಿದರು. ರಕ್ಷಣಾ ಕಾರ್ಯ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ದುರಂತದಲ್ಲಿ ಸಿಲುಕಿರುವ ಹಾಗೂ ನಾಪತ್ತೆಯಾಗಿರುವ ಕನ್ನಡಿಗರ ಮಾಹಿತಿ ಪಡೆದು, ಅಗತ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಕ್ಷಣಾ ಪಡೆಗಳಿಂದ ಸಹ ಮಾಹಿತಿಗಳನ್ನು ಪಡೆದರು.  

ಬೆಂಗಳೂರು(ಆ.01):  ಗುಡ್ಡ ಕುಸಿತದಿಂದ ತತ್ತರಿಸಿರುವ ಕೇರಳದ ನೆರವಿಗಾಗಿ ಕರ್ನಾಟಕದಿಂದ ಕಾರ್ಮಿಕ ಸಚಿವ ಸಂತೋಷ ಲಾಡ್‌ ನೇತೃತ್ವದ ಕರ್ನಾಟಕದ ತಂಡ ದಾವಿಸಿದೆ. ಹಿಂದೆ 2013ರಲ್ಲಿ ಉತ್ತರಾಖಂಡದಲ್ಲಿ ಸಂಭವಿಸಿದ್ದ ಮೇಘಸ್ಫೋಟ ಹಾಗೂ ಕಳೆದ ವರ್ಷ ಓಡಿಶಾದಲ್ಲಿ ನಡೆದಿದ್ದ ರೈಲ್ವೆ ಅಪಘಾತದಲ್ಲಿ ಸಿಲುಕಿದವರ ರಕ್ಷಣೆಗೂ ಲಾಡ್‌ ತೆರಳಿದ್ದರು ಎಂಬುದು ಸ್ಮರಣೀಯ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಗುಡ್ಡ ಕುಸಿತ ದುರಂತ ನಡೆದ ಕೇರಳದ ವಯನಾಡಿಗೆ ತೆರಳಿದ ಸಚಿವ ಲಾಡ್ ಹಲವು ಸಂತ್ರಸ್ತ ಪ್ರದೇಶಗಳಿಗೆ ಭೇಟಿ ನೀಡಿದರು. ರಕ್ಷಣಾ ಕಾರ್ಯ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ದುರಂತದಲ್ಲಿ ಸಿಲುಕಿರುವ ಹಾಗೂ ನಾಪತ್ತೆಯಾಗಿರುವ ಕನ್ನಡಿಗರ ಮಾಹಿತಿ ಪಡೆದು, ಅಗತ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಕ್ಷಣಾ ಪಡೆಗಳಿಂದ ಸಹ ಮಾಹಿತಿಗಳನ್ನು ಪಡೆದರು.
ಕೇರಳ ಸರ್ಕಾರದೊಂದಿಗೆ ನಿಕಟ ಸಂಪರ್ಕದಲ್ಲಿರುವ ಸಚಿವರು, ಕನ್ನಡಿಗರ ರಕ್ಷಣೆಗೆ ಬೇಕಾದ ವ್ಯವಸ್ಥೆಗಳನ್ನು ಶೀಘ್ರವಾಗಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಯನಾಡು ಭೀಕರ ಭೂಕುಸಿತ ದುರಂತ: ಮೃತರ ಸಂಖ್ಯೆ 270ಕ್ಕೇರಿಕೆ, 200ಕ್ಕೂ ಹೆಚ್ಚು ಮಂದಿ ನಾಪತ್ತೆ..!

ಆಪತ್ಬಾಂಧವ:

ದೇಶದ ಯಾವುದೇ ರಾಜ್ಯದಲ್ಲೇ ಈ ರೀತಿಯ ಅವಘಡ ಸಂಭವಿಸಿದರೂ ಮೊದಲು ದಾವಿಸುವುದು ಲಾಡ್‌. ಹಿಂದೆ 2013ರಲ್ಲಿ ಉತ್ತರಾಖಂಡಕ್ಕೆ ತೆರಳಿ ಅಲ್ಲಿ ಸಂಭವಿಸಿದ್ದ ಮೇಘಾಸ್ಫೋಟದಲ್ಲಿನ ಕನ್ನಡಿಗರಷ್ಟೇ ಅಲ್ಲ ಬೇರೆ ರಾಜ್ಯದವರನ್ನು ರಕ್ಷಿಸಿದ್ದರು. ಇನ್ನು 2023ರಲ್ಲಿ ಓಡಿಸಾದಲ್ಲಿ ಸಂಭವಿಸಿದ್ದ ರೈಲು ದುರಂತದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣಾ ಕಾರ್ಯವೂ ಲಾಡ್‌ ನೇತೃತ್ವದಲ್ಲೇ ರಾಜ್ಯ ಸರ್ಕಾರ ಕೈಗೊಂಡಿತ್ತು. ಹೀಗಾಗಿ ಇವರನ್ನು ಅಪತ್ಬಾಂಧವ ಎಂದು ಕರೆಯಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್