
ವಿಜಯನಗರ (ಫೆ.28): ರಾಜ್ಯಸಭೆ ಚುನಾವಣೆ ಫಲಿತಾಂಶದ ವೇಳೆ ಗೆಲುವು ಪಡೆದ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲೇ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿರುವುದು ರಾಜ್ಯಾದ್ಯಂತ ವಿವಾದ ಭುಗಿಲೆದ್ದಿದೆ. ಬಿಜೆಪಿ ನಾಯಕರು ವಿಧಾನಸೌಧ ಪೊಲೀಸ್ ಠಾಣೆ ಮುಂದೆಯೇ ಪ್ರತಿಭಟನೆ ನಡೆಸಿ ದೇಶದ್ರೋಹಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ನಡುವೆ ಘೋಷಣೆ ಕುರಿತಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಅನ್ನೋದು ನನ್ನ ಗಮನಕ್ಕೆ ಬಂದಿದೆ. ಯಾರೇ ಆಗಲಿ ದೇಶದ್ರೋಹದ ಹೇಳಿಕೆಗಳನ್ನ ಒಪ್ಪೊಲ್ಲ. ಪಾಕ್ ಪರ ಘೊಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಆಗಬೇಕು. ಐ ರಿಪೀಟ್.., ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ಆಗಲೇಬೇಕು ಎಂದರು.
ಇನ್ನು ಈ ವಿಚಾರ ಸಂಬಂಧ ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆ ನಾಸಿರ್ ಹುಸೇನ್ ಕೂಗಾಡಿದ್ದರ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ, ಮಾಧ್ಯಮದವರ ಮೇಲೆ ಕೂಗಾಡುವುದು, ನಿಂದಿಸುವುದು ಸರಿಯಲ್ಲ. ಮಾಧ್ಯಮದವರನ್ನ ಗೌರವದಿಂದ ಕಾಣಬೇಕು. ಮಾಧ್ಯಮದವರ ಮೇಲೆ ಆ ರೀತಿ ಮಾಡೋದು ಸರಿಯಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ