
ಬೆಂಗಳೂರು(ಡಿ.3): ಮುಖ್ಯಮಂತ್ರಿಗಳ ಅಧಿಕಾರ ತ್ಯಾಗದ ಕುರಿತ ವೈರಾಗ್ಯದ ಹೇಳಿಕೆಯು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಸಿ.ಎಂ. ಮಾತುಗಳನ್ನು ಸಮರ್ಥಿಸಿಕೊಂಡಿರುವ ಅವರು, 'ಯಾರಿಗೂ ಅಧಿಕಾರ ಶಾಶ್ವತವಲ್ಲ' ಎಂದು ಪುನರುಚ್ಚರಿಸಿದರು.
ಮುಖ್ಯಮಂತ್ರಿಗಳು ಮಾನಸಿಕವಾಗಿ ಸಿದ್ಧರಾಗಿದ್ದಾರೆ ಎಂದಲ್ಲ, ಆದರೆ 'ಮೂವತ್ತು ತಿಂಗಳ ನಂತರವಾದರೂ ಬಿಡಬಹುದು, ಅದಕ್ಕೂ ಮೊದಲೇ ಬಿಡಬಹುದು. ಬಿಡುವುದಂತೂ ಪಕ್ಕಾ. ಯಾವಾಗಲಾದ್ರೂ ಬಿಡಲೇಬೇಕು' ಎಂದು ಜಾರಕಿಹೊಳಿ ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನದ ಬಗ್ಗೆ ಎಲ್ಲಾ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ. ಯಾವ ರೀತಿಯಲ್ಲಿ ಹೈಕಮಾಂಡ್ ಬಗೆಹರಿಸುತ್ತೆ ಅಂತ ನೋಡೋಣ. ಪಕ್ಷದಲ್ಲಿ ಒಳ್ಳೆಯ ವಾತಾವರಣ ಇರಬೇಕು ಅಂತ ಕಾರ್ಯಕರ್ತರು ಬಯಸುತ್ತಾರೆ ಎಂದರು. ಇದೇ ವೇಳೆ ದಲಿತ ಸಿಎಂ ವಿಚಾರ ತಳ್ಳಿಹಾಕಿದ ಸಚಿವರು, ಈ ಅವಧಿಯಲ್ಲಿ ದಲಿತ ಸಿಎಂ ಬಗ್ಗೆ ಯಾವುದೇ ಚರ್ಚೆ ಇಲ್ಲ. ಪರಮೇಶ್ವರ್ ಒಬ್ಬ ಸೀನಿಯರ್ ಇದ್ದಾರೆ. ಸಿಎಂ ಬಗ್ಗೆ ಎಲ್ಲ ಮುಗಿದಿದೆ ಈಗ ಮತ್ತೆ ಶುರು ಮಾಡುವುದು ಬೇಡ. ನಿನ್ನೆ ಎಲ್ಲ ಮುಗಿದಿದೆ, ಪದೇ ಪದೇ ಆ ವಿಚಾರ ಮಾತನಾಡುವುದು ಬೇಡ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ