
ಬೆಳಗಾವಿ(ಜ.11): ಬಿಜೆಪಿಯವರ ಸಂಕ್ರಾಂತಿ ಡೆಡ್ ಲೈನ್ ಕುರಿತು ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ, ಸಂಕ್ರಾಂತಿ ಬಳಿಕ ಅದೆನಾಗುತ್ತೋ ನೋಡೋಣ ಎಂದು ಕುಹುಕವಾಡಿದ್ದಾರೆ.
ರಾಜ್ಯ ಇಲ್ಲೇ ಇರುತ್ತೆ, ದೇಶ ಇಲ್ಲೇ ಇರುತ್ತೆ, ನಾವೂ ನೀವೂ ಇಲ್ಲೇ ಇರುತ್ತೇವೆ. ಅದ್ಯಾವ ಕ್ರಾಂತಿಯಾಗುತ್ತೋ ನೋಡೋಣ ಎಂದು ಸತೀಶ್ ವ್ಯಂಗ್ಯವಾಡಿದರು.
ಆಪರೇಷನ್ ಭಯದಿಂದ ಕಾಂಗ್ರೆಸ್ ಶಾಸಕರು ದೆಹಲಿಗೆ ಹೋರಟಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸದ ಸಚಿವ, ಈ ಕುರಿತು ತಮಗೇನು ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯಿಂದ ನಿಜವಾಗಲೂ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಡೆದಿದೆಯೇ ಎಂಬ ಪ್ರಶ್ನೆಗೆ, ಅದು ಅವರ ರಾಜಕೀಯ ತಂತ್ರಗಾರಿಕೆಯಾಗಿರಬಹದು ಆದರೆ ನಮ್ಮ ಶಾಸಕರು ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಇನ್ನು ಸಹೋದರ ರಮೇಶ್ ಜಾರಕಿಹೊಳಿ ಕುರಿತು ಕೇಳಿದ ಪ್ರಶ್ನೆಗೆ ಸರಿಯಾಗಿ ಉತ್ತರಿಸದ ಸತೀಶ್, ಅವರ ಅಸಮಾಧಾನ ಬಗೆಹರಿಸಲಾಗುವುದು ಎಂದು ಈಗಾಗಲೇ ಕೆಪಿಸಿಸಿ ಅಧ್ಯಕ್ಷರು ಭರವಸೆ ನೀಡಿದ್ದು, ಅವರು ಸಿಕ್ಕರೆ ನಾನೂ ಕೂಡ ಮಾತನಾಡುತ್ತೇನೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ