ಸವದತ್ತಿ ಯಲ್ಲಮ್ಮ ದೇಗುಳ ಅಭಿವೃದ್ಧಿಗೆ ಮುಜರಾಯಿ ಸಚಿವೆ ಆದೇಶ

By Suvarna NewsFirst Published Oct 15, 2021, 4:52 PM IST
Highlights
  • ರಾಜ್ಯದ ಪ್ರಮುಖ ಶ್ರದ್ಧಾಕೇಂದ್ರವಾದ ಬೆಳಗಾವಿ ಜಿಲ್ಲೆಯ  ಸವದತ್ತಿ ಯಲ್ಲಮ್ಮದೇವಿ ದೇವಾಲಯದಲ್ಲಿ ವಿಶೇಷ ಪೂಜೆ
  •  ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ನಾಡಿನಾದ್ಯಂತ ನಡೆಯುವ ವಿಶೇಷ ಪೂಜಾ ಕೈಂಕರ್ಯಗಳಿಗೆ ಚಾಲನೆ ನೀಡಿದ ಮುಜರಾಯಿ  ಸಚಿವೆ ಶಶಿಕಲಾ  ಜೊಲ್ಲೆ

ಸವದತ್ತಿ (ಅ.15): ದುಷ್ಟ ಶಕ್ತಿಗಳ ಸಂಹಾರದ ಪ್ರತೀಕವಾಗಿ ಆಚರಿಸುವ ವಿಜಯದಶಮಿಯ (Vijayadashami)  ಸಂಧರ್ಭದಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಗಳು  ನಡೆದಿದ್ದು, ಮುಜರಾಯಿ, ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಸವದತ್ತಿಯಲ್ಲಿ (Saudatti) ಚಾಲನೆ ನೀಡಿದರು. 

ರಾಜ್ಯದ ಪ್ರಮುಖ ಶ್ರದ್ಧಾ ಕೇಂದ್ರವಾದ ಬೆಳಗಾವಿ (Belagavi) ಜಿಲ್ಲೆಯ  ಸವದತ್ತಿ ಯಲ್ಲಮ್ಮದೇವಿ ದೇವಾಲಯದಲ್ಲಿ  ಶುಕ್ರವಾರ ಬೆಳಗ್ಗೆ ರಾಜ್ಯದ ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವರಾದ  ಶಶಿಕಲಾ  ಜೊಲ್ಲೆ  ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ನಾಡಿನಾದ್ಯಂತ ನಡೆಯುವ ವಿಶೇಷ ಪೂಜಾ ಕೈಂಕರ್ಯಗಳಿಗೆ ಚಾಲನೆ ನೀಡಿದರು.

ಶಶಿಕಲಾ ಜೊಲ್ಲೆ ಮತ್ತೊಂದು ವಿವಾದ : ನಿಯಮ ಮರೆತ ಸಚಿವೆ

ಮುಂಜಾನೆ ಆರು ಗಂಟೆಗೆ ಯಲ್ಲಮ್ಮ ದೇವಾಲಯಕ್ಕೆ (Yallamma Temple) ಆಗಮಿಸಿದ ಸಚಿವೆ ಜೊಲ್ಲೆ ದೇವಾಲಯದಲ್ಲಿ ಕೋವಿಡ್ (Covid) ಹಿನ್ನೆಲೆಯಲ್ಲಿ ನಮ್ಮ ನಾಡಿನ ಸಾರ್ವಜನಿಕರಿಗೆ ಅದರಲ್ಲೂ ವಿಶೇಷವಾಗಿ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಅನುಗ್ರಹಿಸಬೇಕೆಂದು ದೇವಿಯಲ್ಲಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು.
 
ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ತೊಂದರೆ ಗೊಳಗಾಗಿದ್ದು, ಮಕ್ಕಳು ಶಾಲೆಯತ್ತ ಮುಖ ಮಾಡದೇ ಮನೆಯಲ್ಲೇ ಇರುವಂತಾಗಿದೆ. ಸದ್ಯ ಶಾಲೆಗಳು (School) ತೆರೆದಿದ್ದು, ಮಕ್ಕಳಿಗೂ (Children) ಯಾವುದೇ ಸಮಸ್ಯೆಯಾಗಬಾರದೆಂದು  ಪ್ರಾರ್ಥಿಸಿದರು.  ಕೋವಿಡ್ ಸೋಂಕಿನಿಂದ ತೊಂದರೆಯಾಗಿರುವ ನಾಡಿನ ಜನರು ಸುಭಿಕ್ಷ ವಾತಾವರಣದಲ್ಲಿ ಜೀವಿಸುವಂತೆ ಅನುಗ್ರಹಿಸಬೇಕೆಂದು ಕೋರಿದರು. 

ಇಂದಿನಿಂದ ಸವದತ್ತಿ ಯಲ್ಲಮ್ಮ ದೇವಿ ದರ್ಶನ ಆರಂಭ, ಭಕ್ತಾದಿಗಳಿಗೆ ಕೆಲವು ನಿರ್ಬಂಧ

ಹಿರಿಯ ಅಧಿಕಾರಿಗಳೊಂದಿಗೆ ಸಮಲೋಚನೆ : ನಂತರ ದೇವಾಲಯದ ಅಧಿಕಾರಿಗಳು ಹಾಗೂ ಅರ್ಚಕರೊಂದಿಗೆ (Priest) ಚರ್ಚಿಸಿದ ಅವರು, ದೇವಾಲಯದ ಅಗತ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಸವದತ್ತಿ ಶ್ರೀಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಲೋಚನೆ ನಡೆಸಿ ವಿಸ್ತೃತ ಪ್ರಸ್ತಾವನೆ ಮತ್ತು ಕ್ರಿಯಾ ಯೋಜನೆ ರೂಪಿಸಲು ಸೂಚನೆ ನೀಡಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಇಂದಿನ ವಿಜಯ ದಶಮಿ (Vijay Dashami) ಧಾರ್ಮಿಕ ಕಾರ್ಯಕ್ರಮಗಳಿಗೆ ತೊಂದರೆಯಾಗದಂತೆ , ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥಿಸಿ ವಿಶೇಷ ಪೂಜೆಗಳನ್ನು (Special Pooja) ನೆರವೇರಿಸಲಾಗಿದೆ ಎಂದು ಹೇಳಿದರು.
 
ಸುಧಾರಣಾ ಕ್ರಮ : ರಾಜ್ಯದ ಎಲ್ಲ ದೇವಾಲಯಗಳಲ್ಲಿ ಭಕ್ತ ಸಮೂಹಕ್ಕೆ ಅತ್ಯುತ್ತಮ ಸೌಕರ್ಯ ಒದಗಿಸುವುದು ಹಾಗೂ ಉತ್ತಮ ಆಧ್ಯಾತ್ಮಿಕ ವಾತಾವರಣ ನಿರ್ಮಾಣವಾಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ತಾವು ಸಚಿವರಾದ ನಂತರ ಇಲಾಖೆಗೆ ಸಂಬಂಧಿಸಿದಂತೆ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ದೇವಾಲಯಗಳ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದು, ಮತ್ತು ತ್ವರಿತಗತಿಯಲ್ಲಿ ದೇವಾಲಯಗಳ ಸೇವೆ ದೊರೆಯುವಂತೆ ಮಾಡಲು  ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ  ಎಂದು ಶಶಿಕಲಾ ಜೊಲ್ಲೆ (shashikala Jolle) ಹೇಳಿದರು.

ವಿಶೇಷ ಪೂಜೆಗೆ ಸಚಿವರನ್ನು ದೇವಾಲಯದ ಅಧಿಕಾರಿಗಳು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಚಿಕ್ಕೋಡಿ ಸಂಸದರಾದ ಅಣ್ಣಾ ಸಾಹೇಬ ಜೊಲ್ಲೆ, ಸ್ಥಳೀಯ ಶಾಸಕರಾದ ಆನಂದ ಮಾಮನಿ, ದೇವಾಲಯದ ಪ್ರಮುಖರಾದ ಕೋಟರಗಸ್ತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು. 

click me!