'ಅವರು 'ಟೂ ಮಚ್' ಅಂದಿದ್ದು ನನಗೆ ಗೊತ್ತಿಲ್ಲ' ; ಸಮೀಕ್ಷೆ ಬಗ್ಗೆ ಡಿಕೆಶಿ ಆಕ್ಷೇಪ ಆರೋಪಕ್ಕೆ ತಂಗಡಗಿ ಸ್ಪಷ್ಟನೆ

Published : Oct 04, 2025, 06:27 PM IST
DK Shivakumar survey controversy

ಸಾರಾಂಶ

ಸಮೀಕ್ಷೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರ 'ಟೂ ಮಚ್' ಹೇಳಿಕೆಗೆ ಕೊಪ್ಪಳದಲ್ಲಿ ಸಚಿವ ಶಿವರಾಜ್ ತಂಗಡಗಿ ಪ್ರತಿಕ್ರಿಯಿಸಿದ್ದಾರೆ. ಇದು ಜಾತಿ ಗಣತಿಯಲ್ಲ, ಕೇವಲ ಒಂದು ಸಮೀಕ್ಷೆ ಎಂದ ಅವರು, ಇದರಲ್ಲಿನ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುವ ಒತ್ತಡವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳ (ಅ.4): ಸಮೀಕ್ಷೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ ಅವರು'ಟೂ ಮಚ್' ಅಂದಿರೋ ವಿಚಾರ ನನಗೆ ಗೊತ್ತಿಲ್ಲ ಎಂದು ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ಹೇಳಿದರು

ಸಮೀಕ್ಷೆ ಕುರಿತು ಡಿಕೆ ಶಿವಕುಮಾರ್ ಅಕ್ಷೇಪ ವಿಚಾರ ಸಂಬಂಧ ಇಂದು ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಸಚಿವರು, ಇವತ್ತು ಸಮೀಕ್ಷೆಗೆ ನಮ್ಮ ಮನೆಗೂ ಬಂದಿದ್ದರು, ನಾನು ಮಾಹಿತಿ ಕೊಟ್ಟಿದ್ದೇನೆ. ಆದರೆ, ತೀರಾ ವೈಯಕ್ತಿಕ ಪ್ರಶ್ನೆಗಳು ಇದರಲ್ಲಿ ಯಾವುದೂ ಇರಲಿಲ್ಲ. ಟ್ರ್ಯಾಕ್ಟರ್ ಇದೆಯೋ ಇಲ್ಲವೋ ಎಂಬಂತಹ ಪ್ರಶ್ನೆಗಳನ್ನು ಕೇಳಿರಬಹುದು. ಕೆಲವೊಮ್ಮೆ ಸಮೀಕ್ಷೆ ಮಾಡುವವರು ಅತಿರೇಕವಾಗಿ ಕೇಳಿರಬಹುದು ಎಂದು ಸಚಿವ ತಂಗಡಗಿ ಹೇಳಿದರು.

ಇದನ್ನೂ ಓದಿ: ಚು. ಆಯೋಗದಿಂದ 6 ರಾಜಕೀಯ ಪಕ್ಷಗಳಿಗೆ ಶಾಕ್: ಅಂಬೇಡ್ಕರ್ ಪೀಪಲ್ಸ್ ಪಾರ್ಟಿ, ವಾಟಾಳ್ ಪಾರ್ಟಿ ಸೇರಿ ನೋಂದಾಯಿತ ಮಾನ್ಯತೆ ಪಡೆಯದ್ದಕ್ಕೆ ಶೋಕಾಸ್ ನೋಟೀಸ್

ಜಾತಿ ಗಣತಿಯನ್ನು ನಾವು ಮಾಡುತ್ತಿಲ್ಲ, ಅದು ಕೇಂದ್ರ ಸರ್ಕಾರದ ಜವಾಬ್ದಾರಿ. ಸಮೀಕ್ಷೆಯಲ್ಲಿ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡಬೇಕೆಂಬ ಒತ್ತಡವೂ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಈ ಹೇಳಿಕೆಯಿಂದ ಜಾತಿ ಗಣತಿ ಸಂಬಂಧಿಸಿದ ವಿವಾದಕ್ಕೆ ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಸಿಕ್ಕಂತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!