ಕೊರೋನಾ ಗೆದ್ದ ರಾಮುಲು ಮತ್ತೆ ಕರ್ತವ್ಯಕ್ಕೆ

Kannadaprabha News   | Asianet News
Published : Aug 27, 2020, 08:38 AM ISTUpdated : Aug 27, 2020, 09:34 AM IST
ಕೊರೋನಾ ಗೆದ್ದ ರಾಮುಲು ಮತ್ತೆ ಕರ್ತವ್ಯಕ್ಕೆ

ಸಾರಾಂಶ

ಆರೋಗ್ಯ ಸಚಿವ ಶ್ರೀ ರಾಮುಲು ಕೊರೋನಾ ವೈರಸ್‌ನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಇದೀಗ ಮತ್ತೆ ಕರ್ತವ್ಯಕ್ಕರ ಹಾಜರಾಗುತ್ತಿದ್ದಾರೆ.

ಬೆಂಗಳೂರು (ಆ.26):  ಕೊರೋನಾ ಸೋಂಕಿನಿಂದ ತಾವು ಸಂಪೂರ್ಣ ಗುಣಮುಖವಾಗಿದ್ದು ಗುರುವಾರದಿಂದ ಕರ್ತವ್ಯಕ್ಕೆ ಮರಳುವುದಾಗಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಈ ಸಂಬಂಧ ಬುಧವಾರ ಟ್ವೀಟ್‌ ಮಾಡಿರುವ ಅವರು, ನನ್ನ ಕೋವಿಡ್‌ ಪರೀಕ್ಷೆ ನೆಗೆಟಿವ್‌ ಬಂದಿದೆ. ಈಗ ಸಂಪೂರ್ಣ ಗುಣಮುಖವಾಗಿದ್ದು, ಗುರುವಾರದಿಂದ ಸಾರ್ವಜನಿಕ ಸೇವೆಗೆ ಮರಳುತ್ತೇನೆ. ಶೀಘ್ರ ಗುಣಮುಖನಾಗಲು ನನಗೆ ಅತ್ಯುತ್ತಮ ಚಿಕಿತ್ಸೆ ನೀಡಿದ ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಗೆ ವಿಶೇಷ ಕೃತಜ್ಞತೆಗಳು ಎಂದು ಹೇಳಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ಸಹಕಾರ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಪುಟದ ಸಹೋದ್ಯೋಗಿಗಳು ಮತ್ತು ತಮ್ಮ ಆರೋಗ್ಯಕ್ಕಾಗಿ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ಬೆಂಗಳೂರು: 17 ದಿನದಲ್ಲಿ 50 ಕೊರೋನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ.

ಆಗಸ್ಟ್‌ 9ರಂದು ಕೋವಿಡ್‌ ಸೋಂಕಿಗೆ ಒಳಗಾಗಿದ್ದ ಸಚಿವ ಶ್ರೀರಾಮುಲು ಅವರು ಆ.16ರಂದು ಗುಣಮುಖರಾಗಿ ಬಿಡುಗಡೆಯಾಗಿ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದರು. ಇದರ ನಡುವೆ ಅವರ ತಾಯಿ ಮತ್ತು ಸಹೋದರ ಕೂಡ ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದರಾದರೂ ಆ.21ರಂದು ತಾಯಿ ಹೊನ್ನೂರಮ್ಮ ಅವರು ವಯೋಸಹಜವಾಗಿ ಸಾವನ್ನಪ್ಪಿದ್ದರು. ಇದರಿಂದ ಸಚಿವರು ಕರ್ತವ್ಯಕ್ಕೆ ಮರಳಿರಲಿಲ್ಲ. ಬಳಿಕ ಮತ್ತೊಮ್ಮೆ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್‌ ಬಂದ ಹಿನ್ನೆಲೆಯಲ್ಲಿ ಇದೀಗ ಸಾರ್ವಜನಿಕ ಸೇವೆಗೆ ವಾಪಸಾಗುವುದಾಗಿ ತಿಳಿಸಿದ್ದಾರೆ.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ