ಶ್ರೀರಾಮುಲು ನಿವಾಸ ಸೀಲ್‌ ಡೌನ್: ಸರ್ಕಾರಿ ಮನೆಯಿಂದ ಕಾಲ್ಕಿತ್ತ ಆರೋಗ್ಯ ಸಚಿವ

Published : Jun 19, 2020, 02:57 PM ISTUpdated : Jun 19, 2020, 07:27 PM IST
ಶ್ರೀರಾಮುಲು ನಿವಾಸ ಸೀಲ್‌ ಡೌನ್: ಸರ್ಕಾರಿ ಮನೆಯಿಂದ ಕಾಲ್ಕಿತ್ತ ಆರೋಗ್ಯ ಸಚಿವ

ಸಾರಾಂಶ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣದಲ್ಲಿ ಕೆಲಸ ಮಾಡಿದ್ದ ಮಹಿಳಾ ಕಾನ್ಸ್ ಟೇಬಲ್ ಅವರ ಪತಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ಸಚಿವ ಶ್ರೀರಾಮುಲುಗೆ ಆತಂಕ ಶುರುವಾಗಿದೆ.

ಬೆಂಗಳೂರು, (ಜೂನ್. 19): ಸಿಎಂ ಬಿಎಸ್ ಯಡಿಯೂರಪ್ಪ ಗೃಹ ಕಚೇರಿ ಸೀಲ್ ಡೌನ್‌ ಬೆನ್ನಲ್ಲೇ ಇದೀಗ ಆರೋಗ್ಯ ಸಚಿವ ಬಿ ಶ್ರೀರಾಮುಲು ಸರ್ಕಾರಿ ನಿವಾಸವನ್ನ ಸೀಲ್ ಡೌನ್ ಮಾಡಲಾಗಿದೆ.

ಹೌದು..ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣದಲ್ಲಿ ಕೆಲಸ ಮಾಡಿದ್ದ ಮಹಿಳಾ ಕಾನ್ಸ್ ಟೇಬಲ್ ಅವರ ಪತಿಗೆ ಕೋವಿಡ್-19 ಸೋಂಕು ದೃಢವಾಗಿದೆ.

ಸಿಎಂ ಮನೆ ಬಾಗಿಲಿಗೂ ಬಂತು ಕೊರೋನಾ... ಶುರುವಾಗಿದೆ ಟೆನ್ಷನ್..ಟೆನ್ಷನ್..!

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದಂತ ಸಭೆಯೊಂದರಲ್ಲಿ ಆರೋಗ್ಯ ಸಚಿವ ಬಿ ಶ್ರೀರಾಮುಲು ಭಾಗವಹಿಸಿದ್ದರು. ಈ ಸಭೆಯಲ್ಲಿ ಭಾಗವಹಿಸಿದ್ದಂತ ಮಹಿಳಾ ಪೇದೆಯೊಬ್ಬರ ಪತಿಗೆ ಕೊರೋನಾ ಸೋಂಕು ಪಾಸಿಟಿವ್ ಎಂಬುದಾಗಿ ತಿಳಿದು ಬಂದಿತ್ತು. ಈ ಹಿನ್ನಲೆಯಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾ ಸೀಲ್ ಡೌನ್ ಮಾಡಲಾಗಿತ್ತು.

ಇನ್ನ ಇದೇ ಸಚಿವ ಶ್ರೀರಾಮುಲು ಸಹ ಭಾಗವಹಿಸಿದ್ದರು. ಇದರಿಂದ ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿರುವ ಶ್ರೀರಾಮುಲು ನಿವಾಸವನ್ನ ಸೀಲ್‌ ಡೌನ್ ಮಾಡಲಾಗಿದೆ.

ಶ್ರೀರಾಮುಲು ಸಚಿವರ ಸರ್ಕಾರಿ ನಿವಾಸಕ್ಕೆ ಒಂದು ವಾರ ಕಾಲ, ಸಿಬ್ಬಂದಿ, ಸಾರ್ವಜನಿಕರಿಗೆ ಪ್ರವೇಶ ಇಲ್ಲ. ಸರ್ಕಾರಿ ನಿವಾಸದ ಸಿಬ್ಬಂದಿ ಕೂಡಾ ಸ್ಥಳಾಂತರ ಮಾಡಲಾಗಿದ್ದು, ಸದ್ಯ ಯಾರು ಬರಬೇಡಿ ಎಂದು ಶ್ರೀರಾಮುಲು ಸರ್ಕಾರಿ ನಿವಾಸದಿಂದ ಕಾಲ್ಕಿತ್ತರು.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka Police : ಕರ್ನಾಟಕ ಪೊಲೀಸರ ಮಾನವನ್ನ ರಾಜಸ್ಥಾನದಲ್ಲಿ ಹರಾಜು ಹಾಕಿದ ಪಿಎಸ್‌ಐ; ಜೈಪುರದಲ್ಲಿ ಅರೆಸ್ಟ್!
Puneeth Rajkumar ಸಮಾಧಿಗೆ ನಮಿಸಿದ 'ಕಾಕ್ರೋಚ್ ಜನತಾ ಪಾರ್ಟಿ'! ಪ್ರತಿಭಟನೆಯಲ್ಲಿ ಪ್ರಕಾಶ್ ರಾಜ್ ಸಾಥ್!