ಇದೇನು ಅಕ್ಷಯ ಪಾತ್ರೆ ಅಲ್ಲ : ಸಚಿವ ಸುಧಾಕರ್

Kannadaprabha News   | Asianet News
Published : Nov 08, 2020, 08:23 AM IST
ಇದೇನು ಅಕ್ಷಯ ಪಾತ್ರೆ ಅಲ್ಲ : ಸಚಿವ ಸುಧಾಕರ್

ಸಾರಾಂಶ

ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಅಸಮಾಧಾನ ಹೊರಹಾಕಿದ್ದಾರೆ. ಇದೇನು ಅಕ್ಷಯ ಪಾತ್ರೆ ಅಲ್ಲ ಎಂದಿದ್ದಾರೆ

 ಚಿಕ್ಕಮಗಳೂರು (ನ.08): ರಾಜ್ಯ ಸರ್ಕಾರ ವಿದ್ಯುತ್‌ ದರ ಏರಿಕೆ ಮಾಡಿರುವ ಕ್ರಮವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್‌ ಸಮರ್ಥಿಸಿಕೊಂಡಿದ್ದಾರೆ.

ಇಲ್ಲಿ ಮಾತನಾಡಿದ ಅವರು, ಸರ್ಕಾರ ಅಂದ್ರೆ ಅಕ್ಷಯ ಪಾತ್ರೆ ಅಲ್ಲ. ಜನರಿಂದ ಬರುವ ಹಣದಿಂದಲೇ ಸರಿದೂಗಿಸಿಕೊಂಡು ಹೋಗಬೇಕು. ಸರ್ಕಾರಕ್ಕೂ ಆರ್ಥಿಕವಾಗಿ ಇತಿಮಿತಿ ಇದೆ.

8 ತಿಂಗಳಿಂದ ಸಾರಿಗೆ ವ್ಯವಸ್ಥೆಯಿಂದ ನೂರಾರು ಕೋಟಿ ರುಪಾಯಿ ನಷ್ಟವಾಗಿದೆ. ಇಂತಹ ಕಠಿಣ ಪರಿಸ್ಥಿತಿ ಇರುವುದರಿಂದ ವಿದ್ಯುತ್‌ ದರ ಏರಿಕೆ ಅನಿವಾರ್ಯ. ಜನರು ಇದಕ್ಕೆ ಸಹಕರಿಸಬೇಕು ಎಂದರು.

ಸಚಿವ ಸುಧಾಕರ್‌ಗೆ ಸಿಕ್ಕಿತು ಕೇಂದ್ರದಿಂದ ಪ್ರಶಂಸೆ ..

ಪಟಾಕಿಯ ಹೊಗೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಆದ್ದರಿಂದ ಪಟಾಕಿ ಮಾರಾಟ ನಿಷೇಧಿಸಲು ತೀರ್ಮಾನಿಸಲಾಗಿದೆ. ಇದನ್ನು ವರ್ತಕರು ಅರ್ಥ ಮಾಡಿಕೊಳ್ಳಬೇಕು. ಲಾಭಕ್ಕೋಸ್ಕರ ಕೋಟ್ಯಂತರ ಜನರ ಆರೋಗ್ಯ ನಿರ್ಲಕ್ಷಿಸುವುದು ಸರಿಯಲ್ಲ. ಆದ್ದರಿಂದ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಂಡಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ