ನೈಟ್ ಕರ್ಫ್ಯೂ, ವೀಕೆಂಡ್ ಲಾಕ್‍ಡೌನ್ ಆಗುತ್ತಾ? ಸಚಿವ ಸುಧಾಕರ್​ ಕೊಟ್ಟ ಸ್ಪಷ್ಟನೆ ಇದು!

Published : Apr 03, 2021, 03:05 PM ISTUpdated : Apr 03, 2021, 03:12 PM IST
ನೈಟ್ ಕರ್ಫ್ಯೂ, ವೀಕೆಂಡ್ ಲಾಕ್‍ಡೌನ್ ಆಗುತ್ತಾ? ಸಚಿವ ಸುಧಾಕರ್​ ಕೊಟ್ಟ ಸ್ಪಷ್ಟನೆ ಇದು!

ಸಾರಾಂಶ

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ವೀಕೆಂಡ್ ಲಾಕ್ ಡೌನ್ ಬಗ್ಗೆ ಸಚಿವರು ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರು, (ಏ.03): ಕರೋನಾ ಸೋಂಕು ನಿಯಂತ್ರಿಸುವ ದೃಷ್ಟಿಯಿಂದ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಇಂದು (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಸಲಹಾ ಸಮಿತಿಯವರ ಶಿಫಾರಸಿನ ಮೇಲೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ಮಾಡಿ ಮಾರ್ಗಸೂಚಿಯನ್ನು ಜಾರಿ ಮಾಡಲಾಗಿದೆ. ಇದು ಏಕಾಏಕಿ ತೆಗೆದುಕೊಂಡ ನಿರ್ಧಾರವಲ್ಲ. ಮಾರ್ಗಸೂಚಿ ಸಡಿಲಿಸುವ ಆಲೋಚನೆ ಇಲ್ಲ ಎಂದರು.

ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ

ಸೋಂಕು ನಿಯಂತ್ರಣಕ್ಕೆ ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆ ಅನಿವಾರ್ಯ. ಅಲ್ಲದೆ, ವೈಜ್ಞಾನಿಕ ವರದಿ ಆಧಾರದ ಮೇಲೆ ಕ್ರಮ ಮಾರ್ಗಸೂಚಿ ಪ್ರಕಟಿಸಲಾಗಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಕೊಂಡರು. ಕೋವಿಡ್ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದೆ ಬೇರೆ ದಾರಿ ಇಲ್ಲ. ಕರೊನಾ ಎರಡನೇ ಅಲೆ ಹೊಸ್ತಿಲಲ್ಲಿದ್ದೇವೆ ಹಾಗಾಗಿ ನಿಯಂತ್ರಣ ಕ್ರಮ ಅತ್ಯವಶ್ಯ ಎಂದು ಹೇಳಿದರು.

ಕರ್ಫ್ಯೂ, ಲಾಕ್ ಡೌನ್ ಇಲ್ಲ
ಇನ್ನು ಇದೇ ವೇಳೆ ನೈಟ್ ಕರ್ಫ್ಯೂ, ವೀಕೆಂಡ್ ಲಾಕ್‍ಡೌನ್ ಬಗ್ಗೆ ಸದ್ಯಕ್ಕೆ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದರು. ಕೋವಿಡ್ 2ನೇ ಅಲೆ ಬಗ್ಗೆ ಜನರು ಸಾಕಷ್ಟು ಎಚ್ಚರದಿಂದಿರಬೇಕು. ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಮನವಿ ಮಾಡಿಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌