
ಬೆಂಗಳೂರು, (ಮಾ.24): ದಿನದಿಂದ ದಿನಕ್ಕೆ ಕೊರೋನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಎರಡನೆ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಲಾಕ್ಡೌನ್ ಮಾಡಬೇಕೆಂಬ ಉದ್ದೇಶ ಸರ್ಕಾರಕ್ಕಿಲ್ಲ. ಆದರೆ, ಅನಿವಾರ್ಯ ಪರಿಸ್ಥಿತಿ ನಿರ್ಮಾಣ ಮಾಡಬಾರದೆಂದು ಎಂದರು.
ಶುರುವಾಯ್ತು ಕೊರೋನಾ 2ನೇ ಅಲೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ನಮಗೆ ಲಾಕ್ ಡೌನ್ ಮಾಡಿದರೆ ಖುಷಿ ಇಲ್ಲ. ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ವೈರಸ್ ಸೋಂಕು ಹೆಚ್ಚಳವಾಗಿದ್ದು, ಹಲವು ನಗರಗಳಲ್ಲಿ ಮತ್ತೆ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಾಗಿ ಜನರ ಸಹಕಾರ ಮುಖ್ಯ ಎಂದು ಹೇಳಿದರು.
ನಾನಾಗಲಿ, ಸಿಎಂ ಆಗಲಿ ಏನು ಮಾಡಬೇಕಾಗುತ್ತದೆ. ಸೋಂಕು ಹೆಚ್ಚಾದರೆ ನಮಗೆ ಬೇರೆ ಮಾರ್ಗ ಇಲ್ಲ ಲಾಕ್ ಡೌನ್ ಮಾಡಲಾಗುತ್ತದೆ. ಇನ್ನು ರಾಜ್ಯದಲ್ಲಿ ಮತ್ತೆ ಕಂಟೇನ್ಮೆಂಟ್ ಜೋನ್ ಜಾರಿ ಮಾಡುವ ಕುರಿತಂತೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ