
ಚಿಕ್ಕಬಳ್ಳಾಪುರ (ಆ.31): ರಾಜ್ಯಕ್ಕೆ ಬರಬೇಕಿರುವ ಜಿಎಸ್ಟಿಹಣ ಕೇಳಲು ಧೈರ್ಯ ಬೇಕಿಲ್ಲ ಎಂದಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೇಂದ್ರದ ಬಳಿ ಜಿಎಸ್ಟಿಹಣ ಕೇಳಲು ರಾಜ್ಯ ಸರ್ಕಾರಕ್ಕೆ ಧೈರ್ಯವಿಲ್ಲ ಎಂಬ ಸಿದ್ದರಾಮಯ್ಯ ಟೀಕೆಗೆ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮಹಾಮಾರಿ ಕೊರೊನಾ ಕಾರಣದಿಂದ ಎಲ್ಲಾ ರಾಜ್ಯಗಳು ಆರ್ಥಿಕ ಸಂಕಷ್ಟದಲ್ಲಿವೆ. ಇದಕ್ಕೆ ಕರ್ನಾಟಕವು ಹೊರತಾಗಿಲ್ಲ. ನಮಗೆ ಬರಬೇಕಿರುವ ಕೇಂದ್ರದ ಜಿಎಸ್ಟಿ ಹಣ ಖೋತಾ. ಆದರೆ, ರಾಜ್ಯದ ಪ್ರಗತಿಗೆ ತುಂಬ ನಷ್ಟವಾಗುತ್ತದೆ.
GST ನಷ್ಟ ಭರ್ತಿಗೆ ಸಾಲ ಪಡೆಯಿರಿ: ರಾಜ್ಯಕ್ಕೆ ಕೇಂದ್ರದ ಉಚಿತ ಸಲಹೆ...
ಆದ್ದರಿಂದ ಮುಖ್ಯಮಂತ್ರಿಗಳು, ಗೃಹ ಸಚಿವರು ಕೇಂದ್ರದ ವಿತ್ತ ಸಚಿವರನ್ನು ಭೇಟಿ ಮಾಡಿ ಅವರಿಗೆ ರಾಜ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿದ್ದಾರೆ ಎಂದರು.
ಇನ್ನು ಜಿಎಸ್ಟಿ ಹಣ ಕೇಳಕ್ಕೆ ರಾಜ್ಯ ಸರ್ಕಾರಕ್ಕೆ ಧೈರ್ಯ ಬೇಕಿಲ್ಲ ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ ಸಚಿವರು, ರಾಜ್ಯದಲ್ಲಿ ಆರ್ಥಿಕ ಪ್ರಗತಿ, ಶಿಸ್ತು ಬರಬೇಕಾದರೆ ಕೇಂದ್ರ ಕೊಡಬೇಕಾದ ಜಿಎಸ್ಟಿ ಹಣ ಬರಬೇಕೆಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ