
ಬೆಂಗಳೂರು (ಜು.24): ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಕಾಳಜಿ ಕೇಂದ್ರಗಳ ಬಳಿಕ ಕೊರೋನಾ ಮಾರ್ಗಸೂಚಿ ಪಾಲಿಸುವಂತೆ ಸುಧಾಕರ್ ಸೂಚನೆ ನೀಡಿದ್ದಾರೆ.
ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ : ಭಾರೀ ಮಳೆ ಎಚ್ಚರಿಕೆ
ಪ್ರವಾಹ ಪೀಡಿತ ಗ್ರಾಮಗಳು ಸ್ಥಳಾಂತರಗೊಂಡಿರುವ ಗ್ರಾಮಗಳ ಸಂತ್ರಸ್ತರಿಗೆ ತೆರೆಯುವ ಕಾಳಜಿ ಕೇಂದ್ರಗಳ ಬಳಿ ಕೈಗೊಳ್ಳಬೇಕಿರುವ ಕ್ರಮಗಳು ಹಾಗೂ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಸವಾಲುಗಳ ಕುರಿತು ಕೈಗೊಳ್ಳಬೇಕಿರುವ ಸಿದ್ಧತೆಗಳ ಬಗ್ಗೆ ಶುಕ್ರವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ಭಾರೀ ಮಳೆ : ರಾಜ್ಯದಿಂದ ತೆರಳುವ 15 ರೈಲು ಸಂಚಾರ ರದ್ದು
ಈ ವೇಳೆ ಮಾತನಾಡಿದ ಅವರು ಕಾಳಜಿ ಕೇಂದ್ರಗಳಲ್ಲಿನ ಸಂತ್ರಸ್ತರಿಗೆ ಶುದ್ಧ ಕುಡಿಯುವ ನೀರು ಗುಣಮಟ್ಟದ ಆಹಾರ ಪೂರೈಸಬೇಕು. ಕೇಂದ್ರಗಳ ಒಳಗೆ ಮತ್ತು ಹೊರಗೆ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ರೋಗ ನಿರೋಧಕ ದ್ರಾವಣ ಸಿಂಪಡಿಸಬೇಕು, ಕೇಂದ್ರದಲ್ಲಿರುವವರ ಆರೋಗ್ಯ ತಪಾಸಣೆ ಮಾಡುವಂತೆ ಸೂಚಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ