ರೋಗಿಗಳ ನರಳಾಟ: ಸಚಿವ ಸುಧಾಕರ್ ಕೊಟ್ಟ ವಾರ್ನಿಂಗ್​ಗೆ ಆಸ್ಪತ್ರೆ ಮುಖ್ಯಸ್ಥರು ಥಂಡಾ

Published : Jun 23, 2020, 08:44 PM IST
ರೋಗಿಗಳ ನರಳಾಟ: ಸಚಿವ ಸುಧಾಕರ್ ಕೊಟ್ಟ ವಾರ್ನಿಂಗ್​ಗೆ ಆಸ್ಪತ್ರೆ ಮುಖ್ಯಸ್ಥರು ಥಂಡಾ

ಸಾರಾಂಶ

ಕೋವಿಡ್​ ಆಸ್ಪತ್ರೆಗಳಲ್ಲಿ ಹಲವು ರೋಗಿಗಳಿಗೆ ಕನಿಷ್ಠ ಮೂಲ ಸೌಲಭ್ಯವೂ ಸಿಗುತ್ತಿಲ್ಲ. ರೋಗದಿಂದ ಬಳಲುತ್ತಿರುವವರಿಗೆ ಹಸಿವಿನ ಶಿಕ್ಷೆಯೂ ಕಾಡುತ್ತಿದೆ ಎನ್ನುವ ಕೊರೋನಾ ಸೋಂಕಿತ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಸಚಿವ ಸುಧಾಕರ್ ಸಂಬಂಧಿಸಿದ ಆಸ್ಪತ್ರೆಗೆ ಖಡಕ್​ ವಾರ್ನಿಂಗ್​ ಕೊಟ್ಟಿದ್ದಾರೆ.

ಬೆಂಗಳೂರು, (ಜೂನ್.23): ಕೋವಿಡ್ ರೋಗಿಗಳಿಗೆ ಸರಿಯಾದ ಚಿಕಿತ್ಸೆ, ಊಟ ಇಲ್ಲ ಎನ್ನುವ ದೂರು ಕೇಳಿಬಂದಿದ್ದೇ ತಡ ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಅವರು ಆಸ್ಪತ್ರೆಗಳ ಮುಖ್ಯಸ್ಥರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. 

ಸ್ವಯಂ ಕ್ವಾರಂಟೈನ್​ಗೆ ಒಳಗಾಗಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ಹಿರಿಯ ಅಧಿಕಾರಿಗಳು ಮತ್ತು ಕೋವಿಡ್ ಆಸ್ಪತ್ರೆ ನಿರ್ದೇಶಕರ ಜತೆ ಇಂದು(ಮಂಗಳವಾರ)ವಿಡಿಯೋ ಸಂವಾದ ನಡೆಸಿದರು. 

ಸೋಂಕಿತರಿಗೆ ಚಿಕಿತ್ಸೆಯೂ ಇಲ್ಲ, ಊಟವೂ ಇಲ್ಲ: ಕೋವಿಡ್ ಆಸ್ಪತ್ರೆ ಅವ್ಯವಸ್ಥೆ ಇದು.!

ಆಸ್ಪತ್ರೆ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ

ವಿಕ್ಟೋರಿಯಾ ಆಸ್ಪತ್ರೆ, ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಮತ್ತು ಬೌರಿಂಗ್ ಆಸ್ಪತ್ರೆ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸಚಿವರು, ಕೋವಿಡ್​ ವಾರ್ಡ್​ನಲ್ಲಿಅವ್ಯವಸ್ಥೆ ಬಗ್ಗೆ ಬಹಳಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಸುಧಾಕರ್ ಅವರು, ರೋಗಿಗಳ ದಾಖಲಾತಿ, ಗುಣಮಟ್ಟದ ಆಹಾರ ಮತ್ತು ಸ್ವಚ್ಛತೆಯಲ್ಲಿ ದೂರುಗಳಿಲ್ಲದಂತೆ ಕಾರ್ಯ ನಿರ್ವಹಿಸಲು ಸೂಚನೆ ನೀಡಿದರು. ಒಂದು ಮತ್ತೆ ಲೋಪಗಳ ಬಗ್ಗೆ ದೂರು ಬಂದಲ್ಲಿ ನಿರ್ದೇಶಕರುಗಳನ್ನೇ ಹೊಣೆ ಮಾಡುವುದಾಗಿ ಖಡಕ್ ಎಚ್ಚರಿಕೆ ಕೊಟ್ಟರು.

ಕೆಎಎಸ್ ಅಧಿಕಾರಿ ನೇಮಕದ ಎಚ್ಚರಿಕೆ

ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ದೂರು ಬಂದಲ್ಲಿ ಸಂಸ್ಥೆಗಳ ಆಡಳಿತ ನೋಡಿಕೊಳ್ಳಲು ಹಿರಿಯ ಕೆಎಎಸ್ ಅಧಿಕಾರಿಗಳನ್ನು ನೇಮಿಸಲಾಗುತ್ತದೆ ಎಂದು ಎಚ್ಚರಿಸಿದರು. ಇನ್ನು ತಜ್ಞರು, ಹಿರಿಯ ವೈದ್ಯರು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಹೋಗುತ್ತಿಲ್ಲ ಎಂಬ ದೂರು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ರೋಗ ಲಕ್ಷಣಗಳಿಲ್ಲದ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್​ಗಳಿಗೆ ಸ್ಥಳಾಂತರಿಸಬೇಕು ಎಂದು ಸೂಚಿಸಿದರು. ಇನ್ನು ನನ್ನ ತಂದೆ, ಪತ್ನಿ ಮತ್ತು ಪುತ್ರಿಗೆ ಕರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಣಮುಖರಾಗಲಿ ಎಂದು ಹಾರೈಸಿರುವ ಎಲ್ಲರಿಗೂ ನಾನು ಚಿರಋಣಿ ಎಂದು ಡಾ. ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: ಸರ್ಕಾರಿ ಆಂಗ್ಲ ಶಾಲೇಲಿ ಕಲಿತ 30,000 ಮಕ್ಕಳು ಅತಂತ್ರ! ಬಿಇಒ, ಡಿಡಿಪಿಐ ಯಾರಿಂದಲೂ ಸ್ಪಷ್ಟ ಉತ್ತರವಿಲ್ಲ! ಯಾರನ್ನು ಕೇಳುವುದು?
₹2000 ಹಣ, ಉಚಿತ ವಿದ್ಯುತ್‌ ಪಡೆಯುತ್ತಿರುವವರೇ ಗಮನಿಸಿ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಾ? ಹಾಗಿದ್ದರೆ ಹೊಸದಾಗಿ ಅರ್ಜಿ ಹಾಕಿ!