ಕೊರೋನಾದಿಂದ ಸುರೇಶ್‌ ಕುಮಾರ್‌ ಆಸ್ಪತ್ರೆಗೆ ದಾಖಲು: ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದ ಸಚಿವರು

Suvarna News   | Asianet News
Published : Oct 11, 2020, 09:35 AM ISTUpdated : Oct 11, 2020, 09:45 AM IST
ಕೊರೋನಾದಿಂದ ಸುರೇಶ್‌ ಕುಮಾರ್‌ ಆಸ್ಪತ್ರೆಗೆ ದಾಖಲು: ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದ ಸಚಿವರು

ಸಾರಾಂಶ

ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದೇನೆ. ವೈದ್ಯರ ನಿಗಾದಲ್ಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ರೀತಿಯಿಂದಲೂ ನನ್ನ ಆರೋಗ್ಯ ಸುಧಾರಿಸುತ್ತಿದೆ ಎಂದು ತಿಳಿಸಿದ ಸಚಿವ ಎಸ್‌. ಸುರೇಶ್‌ ಕುಮಾರ್‌

ಬೆಂಗಳೂರು(ಅ.11): ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರಿಗೂ ಮಹಾಮಾರಿ ಕೊರೋನಾ ವೈರಸ್‌ ದೃಢಪಟ್ಟಿತ್ತು. ಹೀಗಾಗಿ ಸಚಿವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.  ಆದರೆ, ನಿನ್ನೆ(ಶನಿವಾರ) ಏಕಾಏಕಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಈ ಬಗ್ಗೆ ಸ್ವತಃ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರೇ ಸಾಮಾಜಿಕ ಜಾಲತಾಣ ಪೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಳೆದ ಸೋಮವಾರದಿಂದ ನಾನು ಕೋವಿಡ್ 19 ವೈರಸ್ ಪೀಡಿತನಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್‌ನಲ್ಲಿದ್ದೆ.  ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ  ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದೇನೆ. ವೈದ್ಯರ ನಿಗಾದಲ್ಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ರೀತಿಯಿಂದಲೂ ನನ್ನ ಆರೋಗ್ಯ ಸುಧಾರಿಸುತ್ತಿದೆ ಎಂದು ತಿಳಿಸಿದ್ದಾರೆ. 

ಕೊರೋನಾ ಸೋಂಕಿನಿಂದ ಹೋಂ ಕ್ವಾರಂಟೈನ್‌ನಲ್ಲಿದ್ದ ಸಚಿವರು ದಿಢೀರ್ ಆಸ್ಪತ್ರೆಗೆ ಶಿಫ್ಟ್..!

 

ಅಕ್ಟೋಬರ್ 5ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೂ ಪಾಸಿಟಿವ್ ದೃಢಪಟ್ಟಿತ್ತು. ಶನಿವಾರ ವೈದ್ಯರ ಸಲಹೆ ಮೇರೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ